ಬಳಕೆಯಾಗದ ಇ – ಶೌಚಾಲಯ

Webdunia
ಭಾನುವಾರ, 5 ಫೆಬ್ರವರಿ 2023 (20:21 IST)
ಪ್ರತಿ ವರ್ಷ ಸ್ವಚ್ಛ ಭಾರತ ಸಮೀಕ್ಷೆ ಬಂದಾಗ ಪಾಲಿಕೆ ನಿದ್ದೆಯಿಂದ ಎದ್ದವರಂತೆ ಚುರುಕಾಗುತ್ತದೆ. ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ಆದ್ರೆ ಇ – ಶೌಚಾಲಯ ನಿರ್ಮಿಸಿ  ಯಾವ ಪ್ರಯೋಜನವು ಇಲ್ಲದಂತಿದೆ. ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ.ಸ್ವಚ್ಚತೆಗಾಗಿ ಹಲವು ಕೆಲಸ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡುತ್ತದೆ. ತಂತ್ರಜ್ಞಾನ ಆಧಾರಿತ ಸ್ವಯಂಪ್ರೇರಿತವಾಗಿ ಸ್ವಚ್ಛ ಸಾಮರ್ಥ್ಯವಿರುವ ಇ-ಶೌಚಾಲಯವನ್ನು ಉಳಿಸಿಕೊಳ್ಳುವುದು ಬಿಬಿಎಂಪಿಗೆ ತಲೆನೋವಾಗಿದೆ. ಬಿಬಿಎಂಪಿ ಕಳೆದ ಎರಡು ವರ್ಷಗಳ ಹಿಂದೆ ಸಾರ್ವಜನಿಕರ ಶೌಚಾಲಯ ತಪ್ಪಿಸುವ ಉದ್ದೇಶದಿಂದ ಮತ್ತು ಪರಿಸರಸ್ನೇಹಿ ಮತ್ತು ಸಾರ್ವಜನಿಕರ ತುರ್ತು ಅಗತ್ಯಕ್ಕೆ ಪೂರಕವಾಗಿ ಇವುಗಳನ್ನು ನಿರ್ಮಿಸಲಾಗಿತ್ತು. ಎರಡು ಹಂತಗಳಲ್ಲಿ 169 ಕಡೆ ಈ ಶೌಚಾಲಯವನ್ನು ಪ್ರಾರಂಭಿಸಿತ್ತು ಆದರೆ ಕೆಲವು ಕಡೆ ಕೆಟ್ಟು ನಿಂತರೆ ಕೆಲವೆಡೆ ಸಾರ್ವಜನಿಕವಾಗಿ ಬಳಸಿಕೊಳ್ಳುತ್ತಿಲ್ಲ ಅನ್ನುವ ಮಾತು ಇದೆ.

 ಬಿಬಿಎಂಪಿ ಮೊದಲ ಹಂತದಲ್ಲಿ 87 ಮತ್ತು ಎರಡನೇ ಹಂತದಲ್ಲಿ 82 ಶೌಚಾಲಯವನ್ನು ಪರಿಚಯಿಸಿತ್ತು. ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡುವುದು ಇ – ಶೌಚಾಲಯ ಪರಿಚಯಿಸಿದ ಮೇಲೆ ಕಡಿಮೆಯಾಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಸಾರ್ವಜನಿಕರು ಈ ಶೌಚಾಲಯವನ್ನು ಬಳಸದೆ ಅದರ ಹಿಂದೆ ಹೋಗಿ ಮೂತ್ರವಿಸರ್ಜನೆ ಮಾಡುತ್ತಿರುವುದರಿಂದ ಮತ್ತಷ್ಟು ಅವಮಾನಕ್ಕೀಡಾಗಿದೆ. ಕಳೆದ ಮೂರು ವರ್ಷಗಳಿಂದಲೂ ಬಯಲು ಬಹಿರ್ದೆಸೆ ಕಾರಣಕ್ಕೆ ಹೆಚ್ಚಿನ ಅಂಕ ಪಡೆಯುವುದು ಸಾಧ್ಯವಾಗುತ್ತಿಲ್ಲ. ಇ – ಶೌಚಾಲಯ  ಯೋಜನೆಗಳು ಹೊರತಾಗಿಯು 194ರ ರ್ಯಾಂಕಿಗೆ ಬೆಂಗಳೂರು ತೃಪ್ತಿ ಪಟ್ಟಿದೆ.  

ಬೆಂಗಳೂರು ನಗರಕ್ಕೆ ಇ – ಶೌಚಾಲಯಗಳ ಅವಶ್ಯಕತೆ ಇರಲಿಲ್ಲ. ಇರುವಂತಹ ಇ – ಶೌಚಾಲಯಗಳನ್ನು ಸಾರ್ವಕನಿಕರು  ಬಳಸಿಕೊಳ್ಳುತ್ತಿಲ್ಲ . ಅಧಿಕಾರಿಗಳು ಹಣ ದೋಚುವ ನೆಪಕ್ಕೆ ಈ  ರೀತಿ ನಿರ್ಮಾಣ ಮಾಡಿ ಕೈ ಬಿಡ್ಡಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡದ್ದಾರೆ.  ಈ ಎಲ್ಲಾ ಕಾರಣಗಳಿಗಾಗಿ ಸ್ವಚ್ಛ ಸರ್ವೇಕ್ಷಣ ಅಭಿಯಾನದಲ್ಲಿ ಬೆಂಗಳೂರು ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಕಡೆ ಹೇಳಿಕೊಳ್ಳುವಂತಹ ಸ್ವಚ್ಛತೆ  ಇ – ಶೌಚಾಲಯಗಳಲ್ಲಿ ಇಲ್ಲದಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ದೇಶದಾದ್ಯಂತ ಬ್ಯಾಂಕ್‌ಗಳ ಸೇವೆಯಲ್ಲಿ ಭಾರೀ ವ್ಯತ್ಯಯ ಸಾಧ್ಯತೆ: ಕಾರಣ ಇಲ್ಲಿದೆ

ಕೋಗಿಲು ಲೇಔಟ್ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ರಿವೀಲ್

ಧ್ವಜಾರೋಹಣ ಮಾಡುವಾಗ ಎಡವಟ್ಟು: ಐಎಎಸ್ ಟೀನಾ ದಾಬಿ ಅವಸ್ಥೆ ನೋಡಿ video

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಮುಂದಿನ ಸುದ್ದಿ
Show comments