Webdunia - Bharat's app for daily news and videos

Install App

ಯುಪಿಎ 2ನೇ ಅವಧಿಯ ಭ್ರಷ್ಟಾಚಾರ ಬಿಚ್ಚಿಟ್ಟ ಮಾಜಿ ಸಿಎಂ!

Webdunia
ಭಾನುವಾರ, 10 ಫೆಬ್ರವರಿ 2019 (17:32 IST)
ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಪಕ್ಷವನ್ನ ಬಲಗೊಳಿಸಲು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಧುರೀಣ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದಿದ್ದಾರೆ. ಇದೇ ಸಂದರ್ಭದಲ್ಲಿ ಎರಡನೇ ಅವಧಿಯಲ್ಲಿ ಯುಪಿಎ ಸರ್ಕಾರದ ಭ್ರಷ್ಟಾಚಾರದ ಆರೋಪ ಹಾಗೂ ಸರ್ಕಾರದ ಮೇಲೆ ರಾಹುಲ್ ಗಾಂಧಿ ಹಸ್ತಕ್ಷೇಪದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಲೋಕಸಭಾ ಚುನಾವಣೆಯ ದೃಷ್ಟಿಯಿಂದ ತಮ್ಮ ತವರು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನ ಸಂಘಟಿಸಲು ಮಂಡ್ಯ ನಗರದ ಬಿಜಿಎಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣ,  ಯುಪಿಎ ಎರಡನೇ ಅವಧಿಯ ಸರ್ಕಾರದ ಭ್ರಷ್ಟಾಚಾರದ ಆರೋಪದ ಬಗ್ಗೆ ಜೊತೆಗೆ ರಾಹುಲ್ ಹಸ್ತಕ್ಷೇಪದ ಬಗ್ಗೆ ಮಾತನಾಡಿದರು. ಯುಪಿಎ ಎರಡನೇ ಅವಧಿಯಲ್ಲಿ ನಾನು ವಿದೇಶಾಂಗ ಸಚಿವನಾಗಿ ಕಾರ್ಯನಿರ್ವಹಿಸ್ತಿದ್ದೆ.

ಆ ಸಂದರ್ಭದಲ್ಲಿ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಗೆ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಮೇಲೆ ಹಿಡಿತವೇ ಇರಲಿಲ್ಲ. ಆದ್ದರಿಂದಲೇ ದೊಡ್ಡ ದೊಡ್ಡ ಹಗರಣಗಳು ನಡೆದವು. ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಆಗದ ರಾಹುಲ್ ಗಾಂಧಿ ಸರ್ಕಾರದ ಮೇಲೆ ಹಿಡಿತ ಸಾಧಿಸ್ತಿದ್ರು. ಜೊತೆಗೆ 80 ವರ್ಷ ಆದವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂಬ ಫರ್ಮಾನು ಹೊರಡಿಸಿದ್ರು. ಆದ್ದರಿಂದಲೇ ಬೇಸರದಿಂದ ನಾನು ರಾಜೀನಾಮೆ ಕೊಟ್ಟು ಬಂದೆ. ಜೊತೆಗೆ ಸರ್ಕಾರದಲ್ಲಿ ಪಾರ್ಲಿಮೆಂಟರಿ ಜವಾಬ್ದಾರಿ ಇಲ್ಲದ ರಾಹುಲ್ ಹಸ್ತಕ್ಷೇಪ ಬೇಸರ ತರಿಸಿತ್ತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಎಸ್‌ಐಆರ್‌, ರಾಜ್ಯದಲ್ಲಿ 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ ಸಿದ್ಧ

ಇನ್ಮುಂದೆ ಸರ್ಕಾರಿ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯ

ದಹಿ ಹಂಡಿ ಸಂಭ್ರಮಾಚರಣೆ ವೇಳೆ ಇದೆಂಥಾ ಅವಘಡ, ಮಹಿಳೆ ಸಾವು, 22 ಗೋವಿಂದರಿಗೆ ಗಾಯ

ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವಾಗಲೇ ಹೃದಯಾಘಾತ, 38ವರ್ಷದ ವ್ಯಕ್ತಿ ಸಾವು

ಮುಂದಿನ ಸುದ್ದಿ
Show comments