Select Your Language

Notifications

webdunia
webdunia
webdunia
webdunia

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!
ಬೆಂಗಳೂರು , ಮಂಗಳವಾರ, 6 ಮಾರ್ಚ್ 2018 (15:56 IST)
ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ. ಬೆಂಬಲಿಗರ ಸಹಾಯದೊಂದಿಗೆ ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದೇವೆ ಎಂದು ಉಪೇಂದ್ರ ತಮ್ಮ ರೆಸಾರ್ಟ್ ನಲ್ಲಿ ಮಾಧ್ಯಮಗಳಿಗೆ ಹೇಳಿದ್ದಾರೆ.
ನಮ್ಮ ಹೊಸ ಪಕ್ಷ ಪ್ರಜಾಕೀಯ ಪರಿಕಲ್ಪನೆಯಲ್ಲಿರುತ್ತದೆ. ಆದಷ್ಟು ಬೇಗ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ. ಇಂದಿನಿಂದಲೇ ಆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
 
ಜನರಿಗೆ ಬೇಕಾದ ಆರೋಗ್ಯ, ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಕೊಡಿಸುವುದೇ ನಮ್ಮ ಗುರಿಯಾಗಿರುತ್ತದೆ. ನಮ್ಮ ಪ್ರಣಾಳಿಕೆ, ಅಭ್ಯರ್ಥಿಗಳು ಎಲ್ಲರೂ ರೆಡಿ ಇದ್ದಾರೆ. ಈ ಚುನಾವಣೆಯಲ್ಲೇ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸುತ್ತೇವೆ ಎಂದು ಉಪೇಂದ್ರ ಸ್ಪಷ್ಟವಾಗಿ ಹೇಳಿದ್ದಾರೆ.
 
ಹೀಗಾಗಿ ಈ ಚುನಾವಣೆಗೆ ಮೊದಲು ತಮ್ಮ ಬೆಂಬಲಿಗರ ಜತೆ ಹೊಸ ಪಕ್ಷದೊಂದಿಗೆ ಸಕ್ರಿಯ ರಾಜಕಾರಣಕ್ಕೆ ಉಪೇಂದ್ರ ಮರಳಲಿದ್ದಾರೆ. ಬೆಂಬಲಿಗರ ಜತೆ ತಮ್ಮ ರೆಸಾರ್ಟ್ ನಲ್ಲಿ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.
 
ಏನಿದು ಪ್ರಜಾಕೀಯ? ರಾಜಕೀಯವಲ್ಲ ಅರ್ಥ ಮಾಡ್ಕೊಳ್ಳಿ..!
 
ದಯವಿಟ್ಟು ಅರ್ಥ ಮಾಡ್ಕೊಳ್ಳಿ.. ರಾಜಕೀಯ, ಪ್ರಜಾಕೀಯ ಬೇರೆ ಬೇರೆನೇ.. ಎಂದು ನಟ ಉಪೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
 
ಹಾಗಿದ್ದರೆ ಉಪೇಂದ್ರ ಹೇಳುವ ಪ್ರಜಾಕೀಯ ಎಂದರೇನು?
 
ಇಲ್ಲಿ ಪ್ರಜೆಗಳೇ ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ. ಜನ ನಾಯಕರಲ್ಲ. ಉದಾಹರಣೆಗೆ ಒಬ್ಬ ಪೊಲೀಸ್ ಅಧಿಕಾರಿ ವರ್ಗಾವಣೆ ಆಗಬೇಕು ಎಂದರೆ ಜನರೇ ನೇರವಾಗಿ ನಿರ್ಧರಿಸಬೇಕು. ಅವರಿಗೇ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಅಧಿಕಾರ ಇರಬೇಕು. ಇಲ್ಲಿ ಯಾರೂ ನಾಯಕರಿಲ್ಲ. ಜನ ಸಾಮಾನ್ಯರೇ ತಮಗೆ ಏನು ಬೇಕು ಎನ್ನುವುದನ್ನು ನಿರ್ಧರಿಸಬೇಕು.
 
ಹೀಗೆಂದು ಉಪೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಿದ್ದರೆ ಇದೆಲ್ಲಾ ನನಸಾಗೋದು ಯಾವಾಗ? ಇವತ್ತಿಂದಲೇ ಕೆಲಸ ಶುರು ಮಾಡಿದ್ದೇವೆ. ಸುಮಾರು 200 ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನಮ್ಮಲ್ಲಿ ರೆಡಿ ಇದ್ದಾರೆ. ಶೀಘ್ರದಲ್ಲೇ ಹೊಸ ಪಕ್ಷ ಸ್ಥಾಪನೆಯೊಂದಿಗೆ ನಿಮ್ಮ ಮುಂದೆ ಬರುತ್ತೇವೆ ಎಂದು ಉಪೇಂದ್ರ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಮೆರಿಕಾದ ಭಾರತೀಯ ದೂತವಾಸದ ಹೆಸರು ಹೇಳಿ ಹಣ ವಸೂಲಿ ಮಾಡಿದ ಮೋಸಗಾರರು