Webdunia - Bharat's app for daily news and videos

Install App

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

Webdunia
ಮಂಗಳವಾರ, 6 ಮಾರ್ಚ್ 2018 (13:28 IST)
ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇವೆ. ಬೆಂಬಲಿಗರ ಸಹಾಯದೊಂದಿಗೆ ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದೇವೆ ಎಂದು ಉಪೇಂದ್ರ ತಮ್ಮ ರೆಸಾರ್ಟ್ ನಲ್ಲಿ ಮಾಧ್ಯಮಗಳಿಗೆ ಹೇಳಿದ್ದಾರೆ.

ನಮ್ಮ ಹೊಸ ಪಕ್ಷ ಪ್ರಜಾಕೀಯ ಪರಿಕಲ್ಪನೆಯಲ್ಲಿರುತ್ತದೆ. ಆದಷ್ಟು ಬೇಗ ಹೊಸ ಪಕ್ಷ ಸ್ಥಾಪನೆ ಮಾಡುತ್ತೇವೆ. ಇಂದಿನಿಂದಲೇ ಆ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಜನರಿಗೆ ಬೇಕಾದ ಆರೋಗ್ಯ, ಶಿಕ್ಷಣ ಮುಂತಾದ ಸೌಲಭ್ಯಗಳನ್ನು ಕೊಡಿಸುವುದೇ ನಮ್ಮ ಗುರಿಯಾಗಿರುತ್ತದೆ. ನಮ್ಮ ಪ್ರಣಾಳಿಕೆ, ಅಭ್ಯರ್ಥಿಗಳು ಎಲ್ಲರೂ ರೆಡಿ ಇದ್ದಾರೆ. ಈ ಚುನಾವಣೆಯಲ್ಲೇ ಎಲ್ಲಾ ಸ್ಥಾನಗಳಲ್ಲೂ ಸ್ಪರ್ಧಿಸುತ್ತೇವೆ ಎಂದು ಉಪೇಂದ್ರ ಸ್ಪಷ್ಟವಾಗಿ ಹೇಳಿದ್ದಾರೆ.

ಹೀಗಾಗಿ ಈ ಚುನಾವಣೆಗೆ ಮೊದಲು ತಮ್ಮ ಬೆಂಬಲಿಗರ ಜತೆ ಹೊಸ ಪಕ್ಷದೊಂದಿಗೆ ಸಕ್ರಿಯ ರಾಜಕಾರಣಕ್ಕೆ ಉಪೇಂದ್ರ ಮರಳಲಿದ್ದಾರೆ. ಬೆಂಬಲಿಗರ ಜತೆ ತಮ್ಮ ರೆಸಾರ್ಟ್ ನಲ್ಲಿ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments