Publish Date: Wed, 08 Mar 2023 (12:52 IST)
Updated Date: Wed, 08 Mar 2023 (13:15 IST)
ದೇವಸ್ಥಾನದಲ್ಲಿ ಪ್ರಸಾದ ಹಂಚು ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ನೂಕಾಟ, ತಳ್ಳಾಟ ನಡೆಯಿತು. ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಮಾಜಿ ಸಚಿವರೂ ಆಗಿರುವ ಶಾಸಕ ಹೆಚ್.ಡಿ.ರೇವಣ್ಣ ಅವರ ಕಡೆಯಿಂದ ಪ್ರಸಾದ ವಿತರಣೆ ಮಾಡಲು ಕಾರ್ಯಕರ್ತರು ಮುಂದಾದರು. ಈ ವೇಳೆ ನಮಗೂ ಪ್ರಸಾದ ವಿತರಣೆಗೆ ಅವಕಾಶ ನೀಡಿ ಅಂತಾ ಕಾಂಗ್ರೆಸ್ಸಿಗರ ಪಟ್ಟು ಹಿಡಿಯಲಾರಂಭಿಸಿ ಧರಣಿ ಕುಳಿತರು. ಈ ವಿಚಾರ ತಿಳಿದು ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದರು. ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ನೂಕಾಟ ತಳ್ಳಾಟ ಆರಂಭವಾಯಿತು. ಇದರಿಂದಾಗಿ ದೇವಸ್ಥಾನದ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.