ತವರಿಗೆ ಹೋಗುವ ವಿಚಾರಕ್ಕೆ ಗಲಾಟೆ: ಪತ್ನಿ ಆತ್ಮಹತ್ಯೆ

Webdunia
ಮಂಗಳವಾರ, 26 ಡಿಸೆಂಬರ್ 2023 (15:01 IST)
ತವರಿಗೆ ಹೋಗುವ ವಿಚಾರವಾಗಿ ನಡೆದ ಗಲಾಟೆಯಿಂದ ಬೇಸತ್ತಿದ್ದರು' ಎನ್ನಲಾದ ಪವಿತ್ರಾ (28) ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು ಹುಳಿಯೂರಿನ ಪವಿತ್ರಾ, ಹಿರಿಯೂರಿನ ಚೇತನ್‌ ಅವರನ್ನು ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದರು.
ಚೇತನ್, ಬೆಂಗಳೂರಿನ ಕಂಪನಿಯೊಂದರ ಉದ್ಯೋಗಿ. ನೆಲಮಂಗಲದಲ್ಲಿ ನೆಲೆಸಿದ್ದ ದಂಪತಿಗೆ 11 ತಿಂಗಳ ಮಗುವಿದೆ' ಎಂದು ಪೊಲೀಸರು ಹೇಳಿದರು.
 
'ಕ್ರಿಸ್‌ಮಸ್‌ ಹಬ್ಬದ ನಿಮಿತ್ತ ಸಾಲು ಸಾಲು ರಜೆಗಳಿದ್ದವು. ಪವಿತ್ರಾ ಅವರು ಸಂಬಂಧಿಕರೊಬ್ಬರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತವರು ಮನೆಗೆ ಹೋಗೋಣವೆಂದು ಪತಿ ಚೇತನ್‌ಗೆ ಹೇಳಿದ್ದರು. ಕೆಲಸದ ಒತ್ತಡದಿಂದಾಗಿ ರಜೆ ಇಲ್ಲವೆಂದು ಚೇತನ್ ತಿಳಿಸಿದ್ದರು. ಅಷ್ಟಕ್ಕೆ ದಂಪತಿ ನಡುವೆ ಜಗಳ ಶುರುವಾಗಿತ್ತು. ಚೇತನ್, ಮಗುವನ್ನು ಎತ್ತಿಕೊಂಡು ಮನೆಯಿಂದ ಹೊರಗೆ ಹೋಗಿದ್ದರು.'
'ಕೊಠಡಿಗೆ ಹೋಗಿದ್ದ ಪವಿತ್ರಾ, ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಹೋಗಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪ್ರಕರಣ ಸಂಬಂಧ ಪತಿಯನ್ನು ವಿಚಾರಣೆ ನಡೆಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments