Webdunia - Bharat's app for daily news and videos

Install App

ತಾಯಿ ನೋಡಿಕೊಳ್ಳುವ ವಿಚಾರದಲ್ಲಿ ಗಲಾಟೆ- ಮನನೊಂದು ತಾಯಿಮಗ ಆತ್ಮಹತ್ಯೆ

Webdunia
ಭಾನುವಾರ, 13 ನವೆಂಬರ್ 2022 (20:38 IST)
ತಾಯಿ ನೋಡಿಕೊಳ್ಳುವ ವಿಚಾರದಲ್ಲಿ ಪತ್ನಿಯೊಂದಿಗೆ ನಡೆದ‌ ಗಲಾಟೆಯಾಗಿ ಮನನೊಂದು ತಾಯಿ-ಮಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಭಾಗ್ಯಮ್ಮ (57) ಹಾಗೂ ಶ್ರೀನಿವಾಸ್ (33)  ಆತ್ಮಹತ್ಯೆ ಶರಣಾದ ತಾಯಿ-ಮಗ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಹೆಗ್ಗನಹಳ್ಳಿಯ ಶ್ರೀಗಂಧನಗರದಲ್ಲಿ ವಾಸವಾಗಿದ್ದ ಶ್ರೀನಿವಾಸ್, ಕಳೆದ  8 ವರ್ಷಗಳ ಹಿಂದೆ ಸಂಧ್ಯಾ ಎಂಬಾಕೆಯೊಂದಿಗೆ ವಿವಾಹವಾಗಿದ್ದ. ದಂಪತಿಗೆ ಆರು ವರ್ಷದ ಮಗನಿದ್ದಾನೆ. ಕಳೆದ ಎರಡು ತಿಂಗಳ ಹಿಂದೆ ಶ್ರೀನಿವಾಸ್, ವಯಸ್ಸಾದ ತನ್ನ ತಾಯಿಯನ್ನು ಕರೆತಂದು ಇರಿಸಿಕೊಂಡಿದ್ದ. ಇದಕ್ಕೆ ಪತ್ನಿ ಗಂಡನೊಂದಿಗೆ ಮುನಿಸಿಕೊಂಡಿದ್ದಳು ಎನ್ನಲಾಗಿದೆ.  ದಂಪತಿ‌ ನಡುವೆ ಪ್ರತಿದಿನ ಜಗಳವಾಗುತಿತ್ತು. ನಮಗೆ ಇರುವುದಕ್ಕೆ ಕಷ್ಟ..‌ಇನ್ನೂ ತಾಯಿಯನ್ನು ಕರೆದುಕೊಂಡು ಬಂದಿದ್ದೀಯಾ ಎಂದು ಪತಿಯೊಂದಿಗೆ ಜಗಳವಾಡುತ್ತಿದ್ದಳು ಎನ್ನಲಾಗಿದೆ. ಕೌಟುಂಬಿಕ ಕಲಹದಿಂದ ಮನನೊಂದ ತಾಯಿ-ಮಗ ಇಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments