Webdunia - Bharat's app for daily news and videos

Install App

ಅಯೋಧ್ಯೆ ಬಾಲರಾಮನನ್ನು ಕೆತ್ತಿದ ಶಿಲ್ಪಿ ಅರುಣ್ ಯೋಗಿಗೆ ವೀಸಾ ನಿರಾಕರಿಸಿದ ಅಮೆರಿಕಾ

Krishnaveni K
ಬುಧವಾರ, 14 ಆಗಸ್ಟ್ 2024 (16:30 IST)
ಮೈಸೂರು: ಅಯೋಧ್ಯೆಯ ಬಾಲರಾಮನ ವಿಗ್ರಹವನ್ನು ಕೆತ್ತಿ ವಿಖ್ಯಾತಿ ಪಡೆದ ಮೈಸೂರಿನ ಅರುಣ್ ಯೋಗಿಗೆ ಅಮೆರಿಕಾ ವೀಸಾ ನಿರಾಕರಿಸಿದೆ. ಇದಕ್ಕೆ ಸೂಕ್ತ ಕಾರಣವನ್ನೂ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಅರುಣ್ ಯೋಗಿ ಅಮೆರಿಕಾದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲವು ನಿಬಂಧನೆಗಳನ್ನು ಪೂರ್ತಿ ಮಾಡಿಲ್ಲ ಎಂದು ಕಾರಣ ನೀಡಿ ಖ್ಯಾತ ಶಿಲ್ಪಿಗೆ ಅಮೆರಿಕಾ ವೀಸಾ ನಿರಾಕರಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗಲು ಜೂನ್ ನಲ್ಲೇ ವೀಸಾಗಾಗಿ ಅರುಣ್ ಯೋಗಿ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ವೀಸಾ ನಿರಾಕರಣೆಯಾಗಿದೆ. ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗಲು ಅರುಣ್ ಯೋಗಿ ಮತ್ತು ಕುಟುಂಬಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ ಅವರಿಗೆ ಈಗ ವೀಸಾ ನಿರಾಕರಿಸಲಾಗಿದೆ.

ಎಲ್ಲಾ ದಾಖಲೆಗಳನ್ನೂ ನೀಡಿದರೂ ಈಗ ವೀಸಾ ನಿರಾಕರಿಸಿರುವುದು ಯಾಕೆ ಎಂದು ಸ್ಪಷ್ಟ ಕಾರಣ ತಿಳಿದಿಲ್ಲ ಎಂದು ಅರುಣ್ ಯೋಗಿ ಹೇಳಿದ್ದಾರೆ. ಆದರೆ ಮತ್ತೆ ವೀಸಾಗೆ ಅರ್ಜಿ ಸಲ್ಲಿಸಲ್ಲ ಎಂದಿದ್ದಾರೆ. ಕೇವಲ ರಾಮಲಲ್ಲಾನ ಮೂರ್ತಿ ಮಾತ್ರವಲ್ಲ, ಹಲವು ವಿಗ್ರಹಗಳನ್ನು ಮಾಡಿ ಕರ್ನಾಟಕದ ಮನೆ ಮಾತಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments