Webdunia - Bharat's app for daily news and videos

Install App

ಬ್ಯಾಂಕ್ ಹ್ಯಾಕ್ಗೆ ಬರೋಬ್ಬರಿ 304 ಸಿಮ್ ಬಳಕೆ..!

Webdunia
ಗುರುವಾರ, 22 ಜುಲೈ 2021 (09:17 IST)
ಬೆಳಗಾವಿ(ಜು.21): ಬ್ಯಾಂಕ್ ಅಕೌಂಟ್ ಕೆವೈಸಿ ಮಾಡುವುದಾಗಿ ಹೇಳಿ ಬರೋಬ್ಬರಿ 10 ಲಕ್ಷ ವಂಚನೆ ಮಾಡಿದ ಅಂತಾರಾಜ್ಯದ ಮೂವರು ಸೈಬರ್ ವಂಚಕರನ್ನು ನಗರ ಪೊಲೀಸರು ಪತ್ತೆ ಹಚ್ಚಿ ಜೈಲಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.

* ಮೂವರು ಹ್ಯಾಕರ್ಗಳ ಬಂಧನ
* ಬೆಳಗಾವಿ ನಗರ ಪೊಲೀಸರ ಯಶಸ್ವಿ ಕಾರ್ಯಾಚರಣೆ
* ಓಟಿಪಿ ಪಡೆದು 102 ಬಾರಿ ಕನ್ನಹಾಕಿ 10 ಲಕ್ಷ ವಂಚನೆ ಮಾಡಿದ್ದ ಖದೀಮರು


 
ಜಾರ್ಖಂಡ ಮೂಲದ ಜಾಮ್ತಾರಾ ಜಿಲ್ಲೆಯ ದಂಪತಿ ಆಶಾ (25) ಚಂದ್ರಪ್ರಕಾಶ ದಾಸ್ (30) ಹಾಗೂ ನಾಸಿಕದ ಅನ್ವರ ಅಕ್ಬರಶೇಖ (24) ಬಂಧಿತ ಆರೋಪಿಗಳು. ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ.ವಿಕ್ರಮ್ ಅಮಟೆ ಅವರು, ಈ ಮೂವರು ಆರೋಪಿಗಳು ತಮ್ಮ ಹೆಸರಲ್ಲಿ ಈವರೆಗೆ ಒಟ್ಟು 50 ಬ್ಯಾಂಕ್ ಖಾತೆಗಳನ್ನು ಉಪಯೋಗಿಸಿದ್ದು, ನಾಸಿಕದ ಅನ್ವರ ಇನ್ನುಳಿದ ಆರೋಪಿಗಳ ಹೆಸರಲ್ಲಿ ವಿವಿಧ ಬ್ಯಾಂಕ್ಗಳಲ್ಲಿ ಖಾತೆ ತೆರೆದಿದ್ದ. ಅಲ್ಲದೇ ಗ್ರಾಹಕರನ್ನು ವಂಚಿಸಲು ಬರೋಬ್ಬರಿ 48 ಮೊಬೈಲ್ ಹಾಗೂ 304 ಸಿಮ್ ಬಳಸಿದ್ದರು. ಆ ಪೈಕಿ 5 ಮೊಬೈಲ್ ಹಾಗೂ 3 ಡೆಬಿಟ್ ಕಾರ್ಡ್ಗಳನ್ನು ಜಪ್ತಿ ಮಾಡಲಾಗಿದೆ ಎಂದರು.
ಜೂ.9ರಂದು ಕಂಗ್ರಾಳಿ ಕೆ.ಎಚ್.ಗ್ರಾಮದ ನಿವಾಸಿ, ಬಿಎಸ್ಎನ್ಎಲ್ ನಿವೃತ್ತ ನೌಕರ ಯಲ್ಲಪ್ಪ ನಾರಾಯಣ ಜಾಧವ್ ಅವರಿಗೆ ಕರೆ ಮಾಡಿ, ಕೆವೈಸಿ ಅಪ್ಡೇಟ್ ಮಾಡುವ ನೆಪದಲ್ಲಿ ಲಿಂಕ್ ಬಳಸಲು ತಿಳಿಸಿ, ಓಟಿಪಿ ಪಡೆದು ಬರೋಬ್ಬರಿ 102 ಬಾರಿ ಕನ್ನಹಾಕಿ 10 ಲಕ್ಷ ವಂಚನೆ ಮಾಡಿದ್ದರು. ವಂಚನೆಗೊಳಗಾದ ಯಲ್ಲಪ್ಪ ಈ ಬಗ್ಗೆ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಜೂ. 10ರಂದು ದೂರು ದಾಖಲಿಸಿದ್ದರು ಎಂದು ವಿವರಿಸಿದರು.
ಈ ಪ್ರಕರಣದ ತನಿಖೆಗಾಗಿ ಇನ್ಸಪೆಕ್ಟರ್ ಬಿ.ಆರ್.ಗಡ್ಡೇಕರ ನೇತೃತ್ವದಲ್ಲಿ ಪೇದೆಗಳಾದ ವಿಜಯ ಬಡವಣ್ಣವರ, ಮಾರುತಿ ಕನ್ಯಾಗೋಳ, ಕೆ.ವಿ.ಚರಲಿಂಗಮಠ ಹಾಗೂ ಭುವನೇಶ್ವರಿ ಸೇರಿದಂತೆ ಹಲವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು. ಜು.15ರಂದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈಗಾಗಲೇ ಬೆಂಗಳೂರು, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಜನರಿಗೂ ವಂಚಿಸಿರುವ ಬಗ್ಗೆ ತಿಳಿದುಬಂದಿದ್ದು, ಬೆಂಗಳೂರಿನವರಿಗೆ 12 ಲಕ್ಷ ವಂಚಿಸಿರುವ ಬಗ್ಗೆ ಆರೋಪಿತರು ಬಾಯಿಬಿಟ್ಟಿರುವುದಾಗಿ ತಿಳಿಸಿದರು.
ಎಲ್ಲ ಬ್ಯಾಂಕ್ ಖಾತೆಗಳನ್ನು ಪ್ರೀಜ್ ಮಾಡಿಸಿದ್ದು, ಖಾತೆಗಳಲ್ಲಿ ಒಟ್ಟು 12.56 ಲಕ್ಷ ಅಧಿಕ ಹಣ ಇದೆ. ಹಣ ಕಳೆದುಕೊಂಡ ದೂರುದಾರರಿಗೆ ಕಾನೂನಾತ್ಮಕವಾಗಿ ಹಣ ಹಿಂದಿರುಗಿಸಲಾಗುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಇನ್ಸಪೆಕ್ಟರ್ ಬಿ.ಆರ್.ಗಡ್ಡೇಕರ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments