Publish Date: Wed, 07 Mar 2018 (12:44 IST)
Updated Date: Wed, 07 Mar 2018 (12:46 IST)
ಬೆಂಗಳೂರು: ಮಂಗಳೂರಿನ ಬಿಜೆಪಿ ರ್ಯಾಲಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಿಎಂ ಸಿದ್ದರಾಮಯ್ಯನವರನ್ನು ನರಹಂತಕ ಎಂದಿದ್ದಕ್ಕೆ ಕಾಂಗ್ರೆಸ್ ನಾಯಕ, ಸಚಿವ ಯು ಟಿ ಖಾದರ್ ತಿರುಗೇಟು ನೀಡಿದ್ದಾರೆ.
‘ಬಿಜೆಪಿಯವರು ಸಿಎಂ ವಿರುದ್ಧ ಚೀಪ್ ಪಬ್ಲಿಸಿಟಿಗಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿರುವವರು ಬಿಜೆಪಿಯವರೇ. ನಳಿನ್ ಕುಮಾರ್ ಕಟೀಲ್ ಗೆ ಮಾಡಲು ಕೆಲಸವಿಲ್ಲ. ಅದಕ್ಕೇ ಇಂತಹ ಹೇಳಿಕೆಗಳನ್ನು ಕೊಡುತ್ತಿರುತ್ತಾರೆ’ ಎಂದು ಖಾದರ್ ತಿರುಗೇಟು ನೀಡಿದ್ದಾರೆ.
ನಳಿನ್ ಕುಮಾರ್ ಹೇಳಿಕೆ ವಿರುದ್ಧ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಾ ಟ್ವೀಟ್ ಮಾಡಿ ತಿರುಗೇಟು ನೀಡಿದ್ದರು. ನರಹಂತಕರು ಎಂಬ ಶಬ್ಧವನ್ನು ಹುಟ್ಟು ಹಾಕಿದವರೇ ನೀವು ಎಂದು ಜರೆದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ