Webdunia - Bharat's app for daily news and videos

Install App

ಮಾಜಿ ಸಚಿವ ನಾಗೇಂದ್ರ ಬಂಧನಕ್ಕೆ ನನ್ನ ಅನುಮತಿ ಕೇಳಿಲ್ಲ: ಸ್ಪೀಕರ್ ಯುಟಿ ಖಾದರ್

Krishnaveni K
ಶನಿವಾರ, 13 ಜುಲೈ 2024 (12:33 IST)
ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ನಾಗೇಂದ್ರ ಬಂಧನಕ್ಕೆ ನನ್ನಅನುಮತಿ ಕೇಳಿಲ್ಲ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯ (ಇಡಿ) ನಾಗೇಂದ್ರರನ್ನು ಬಂಧಿಸಿತ್ತು.

ವಾಲ್ಮೀಕಿ ನಿಗಮದಿಂದ ತಮ್ಮ ಆಪ್ತರ ಮೂಲಕ ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಮಾಡಿರುವ ಕುರಿತು ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ದಾಳಿ ನಡೆಸಿದ್ದಲ್ಲದೆ, ನಿನ್ನೆ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಸತತ 7 ಗಂಟೆ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಇಂದು ಬೆಳಿಗ್ಗೆ ನಾಗೇಂದ್ರರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಈ ವೇಳೆ ನ್ಯಾಯಾಧೀಶರು ಅವರನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ಇತ್ತ ನಾಗೇಂದ್ರ ಬಂಧನವಾಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಸ್ಪೀಕರ್ ಯುಟಿ ಖಾದರ್, ‘ಇಡಿ ಅಧಿಕಾರಿಗಳು ನಾಗೇಂದ್ರರನ್ನು ಬಂಧಿಸಿದ ಬಳಿಕ ನನಗೆ ಮಾಹಿತಿ ನೀಡಬೇಕು. ಸೋಮವಾರದಿಂದ ಮುಂಗಾರು ಅಧಿವೇಶನ ಆರಂಭವಾಗಲಿದೆ. ಒಂದು ವೇಳೆ ಅಧಿವೇಶನದ ಸಂದರ್ಭದಲ್ಲಿ ಬಂಧಿಸಿದ್ದರೆ ಅಧಿಕಾರಿಗಳು ನನ್ನ ಅನುಮತಿ ಕೇಳಲೇಬೇಕಿತ್ತು. ಆದರೆ ಈಗ ಬಂಧನದ ಬಳಿಕವಾದರೂ ನನಗೆ ಮಾಹಿತಿ ನೀಡಬೇಕು. ಆದರೆ ಇದುವರೆಗೆ ನನಗೆ ಅಧಿಕೃತ ಮಾಹಿತಿ ನೀಡಿಲ್ಲ’ ಎಂದು ಖಾದರ್ ಹೇಳಿದ್ದಾರೆ.

ಶಾಸಕರನ್ನು ಬಂಧಿಸುವಾಗ ಸ್ಪೀಕರ್ ಅನುಮತಿ ಬೇಕಾಗುತ್ತದೆ. ಆದರೆ ನಾಗೇಂದ್ರ ಬಂಧನದ ಸಂದರ್ಭದಲ್ಲಿ ಸದನ ನಡೆಯುತ್ತಿರಲಿಲ್ಲ. ಹೀಗಾಗಿ ಅಧಿಕೃತವಾಗಿ ಸ್ಪೀಕರ್ ಅನುಮತಿ ಪಡೆದಿರಲಿಲ್ಲ. ಆದರೆ ಬಂಧನದ ಬಳಿಕವೂ ಮಾಹಿತಿ ನೀಡಿಲ್ಲ ಎಂಬುದು ಸ್ಪೀಕರ್ ಖಾದರ್ ಆರೋಪವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments