ಅಮಾನತಾದ ಬಿಜೆಪಿ ಶಾಸಕರೆಲ್ಲರೂ ನನ್ನ ಫ್ರೆಂಡ್ಸ್: ಯುಟಿ ಖಾದರ್

Krishnaveni K
ಸೋಮವಾರ, 24 ಮಾರ್ಚ್ 2025 (12:16 IST)
ಬೆಂಗಳೂರು: ಅಮಾನತಾದ ಬಿಜೆಪಿ ಶಾಸಕರೆಲ್ಲರೂ ನನ್ನ ಫ್ರೆಂಡ್ಸ್. ಆದರೆ ನೆಪ ಇಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸಲು ಯತ್ನಿಸಿದರು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಬಿಜೆಪಿ ಶಾಸಕರ ಅಮಾನತಿನ ಬಗ್ಗೆ ಸಮರ್ಥನೆ ನೀಡಿದ್ದಾರೆ. ಮೊನ್ನೆ ಸದನದಲ್ಲಿ ಗದ್ದಲವೆಬ್ಬಿಸಿದ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಆರು ತಿಂಗಳಿಗೆ ಅಮಾನತು ಮಾಡಿದ್ದರು. ಇದರ ಬಗ್ಗೆ ಇಂದು ಮತ್ತೊಮ್ಮೆ ಮಾಧ್ಯಮಗಳಿಗೆ ಯುಟಿ ಖಾದರ್ ಹೇಳಿದ್ದಾರೆ.

ಹನಿಟ್ರ್ಯಾಪ್ ಬಗ್ಗೆ ತನಿಖೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿಯವರು ಗಲಾಟೆ ಶುರು ಮಾಡಿದ್ರು. ಸಿಎಂ ಸಿದ್ದರಾಮಯ್ಯನವರು ಬಹಳ ಸ್ಪಷ್ಟವಾಗಿ ಸಮಿತಿ ಮಾಡಿ ಈ ಬಗ್ಗೆ ತನಿಖೆ ಮಾಡುತ್ತೇವೆ, ನಿಮ್ಮ ಸಲಹೆಯನ್ನೂ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ ಮೇಲೂ ಬಜೆಟ್ ವಿಷಯವನ್ನೂ ಚರ್ಚೆ ಮಾಡಲೂ ಅವಕಾಶ ಕೊಡದೇ ಗದ್ದಲವೆಬ್ಬಿಸುವುದು ಸರಿಯಾ?

ಆದ ಕಾರಣ ನಾನು ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಯಿತು. ಯುಟಿ ಖಾದರ್ ಆಗಿ ಕ್ಷಮಿಸಬಹುದು. ಆದರೆ ಸ್ಪೀಕರ್ ಸ್ಥಾನಕ್ಕೆ ಗೌರವವಿದೆಯಲ್ಲಾ? ಸ್ಪೀಕರ್ ಸ್ಥಾನ ಕ್ಷಮಿಸಲು ಸಾಧ್ಯವಿಲ್ಲ. ನಾನು ಕ್ರಮ ಕೈಗೊಳ್ಳದೇ ಇದ್ದರೆ ನಮ್ಮ ರಾಜ್ಯದ ಮರ್ಯಾದೆ ಏನಾಗುತ್ತಿತ್ತು? ಮುಂದೆ ಒಳ್ಳೆಯ ನಡತೆ ಕಲಿಯಲಿ ಎಂದು ಈ ಕ್ರಮ ಕೈಗೊಂಡಿದ್ದು ಎಂದು ಯುಟಿ ಖಾದರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments