Webdunia - Bharat's app for daily news and videos

Install App

ಅಮಾನತಾದ ಬಿಜೆಪಿ ಶಾಸಕರೆಲ್ಲರೂ ನನ್ನ ಫ್ರೆಂಡ್ಸ್: ಯುಟಿ ಖಾದರ್

Krishnaveni K
ಸೋಮವಾರ, 24 ಮಾರ್ಚ್ 2025 (12:16 IST)
ಬೆಂಗಳೂರು: ಅಮಾನತಾದ ಬಿಜೆಪಿ ಶಾಸಕರೆಲ್ಲರೂ ನನ್ನ ಫ್ರೆಂಡ್ಸ್. ಆದರೆ ನೆಪ ಇಟ್ಟುಕೊಂಡು ಕಲಾಪಕ್ಕೆ ಅಡ್ಡಿಪಡಿಸಲು ಯತ್ನಿಸಿದರು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

ಇಂದು ಮಾಧ್ಯಮಗಳ ಮುಂದೆ ಮಾತನಾಡಿದ ಅವರು ಬಿಜೆಪಿ ಶಾಸಕರ ಅಮಾನತಿನ ಬಗ್ಗೆ ಸಮರ್ಥನೆ ನೀಡಿದ್ದಾರೆ. ಮೊನ್ನೆ ಸದನದಲ್ಲಿ ಗದ್ದಲವೆಬ್ಬಿಸಿದ ಬಿಜೆಪಿಯ 18 ಶಾಸಕರನ್ನು ಸ್ಪೀಕರ್ ಆರು ತಿಂಗಳಿಗೆ ಅಮಾನತು ಮಾಡಿದ್ದರು. ಇದರ ಬಗ್ಗೆ ಇಂದು ಮತ್ತೊಮ್ಮೆ ಮಾಧ್ಯಮಗಳಿಗೆ ಯುಟಿ ಖಾದರ್ ಹೇಳಿದ್ದಾರೆ.

ಹನಿಟ್ರ್ಯಾಪ್ ಬಗ್ಗೆ ತನಿಖೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿಯವರು ಗಲಾಟೆ ಶುರು ಮಾಡಿದ್ರು. ಸಿಎಂ ಸಿದ್ದರಾಮಯ್ಯನವರು ಬಹಳ ಸ್ಪಷ್ಟವಾಗಿ ಸಮಿತಿ ಮಾಡಿ ಈ ಬಗ್ಗೆ ತನಿಖೆ ಮಾಡುತ್ತೇವೆ, ನಿಮ್ಮ ಸಲಹೆಯನ್ನೂ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ ಮೇಲೂ ಬಜೆಟ್ ವಿಷಯವನ್ನೂ ಚರ್ಚೆ ಮಾಡಲೂ ಅವಕಾಶ ಕೊಡದೇ ಗದ್ದಲವೆಬ್ಬಿಸುವುದು ಸರಿಯಾ?

ಆದ ಕಾರಣ ನಾನು ಅನಿವಾರ್ಯವಾಗಿ ಕ್ರಮ ಕೈಗೊಳ್ಳಬೇಕಾಯಿತು. ಯುಟಿ ಖಾದರ್ ಆಗಿ ಕ್ಷಮಿಸಬಹುದು. ಆದರೆ ಸ್ಪೀಕರ್ ಸ್ಥಾನಕ್ಕೆ ಗೌರವವಿದೆಯಲ್ಲಾ? ಸ್ಪೀಕರ್ ಸ್ಥಾನ ಕ್ಷಮಿಸಲು ಸಾಧ್ಯವಿಲ್ಲ. ನಾನು ಕ್ರಮ ಕೈಗೊಳ್ಳದೇ ಇದ್ದರೆ ನಮ್ಮ ರಾಜ್ಯದ ಮರ್ಯಾದೆ ಏನಾಗುತ್ತಿತ್ತು? ಮುಂದೆ ಒಳ್ಳೆಯ ನಡತೆ ಕಲಿಯಲಿ ಎಂದು ಈ ಕ್ರಮ ಕೈಗೊಂಡಿದ್ದು ಎಂದು ಯುಟಿ ಖಾದರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments