Webdunia - Bharat's app for daily news and videos

Install App

ಅಪಘಾತವಾಗಿ ಟ್ರಕ್ ನಲ್ಲಿ ಸಿಲುಕಿಕೊಂಡ ಚಾಲಕನ ರಕ್ಷಿಸಿದ ಸ್ಪೀಕರ್ ಯುಟಿ ಖಾದರ್: ವಿಡಿಯೋ

Krishnaveni K
ಗುರುವಾರ, 13 ಫೆಬ್ರವರಿ 2025 (09:46 IST)
Photo Credit: X
ಮಂಗಳೂರು: ರಸ್ತೆ ಅಪಘಾತವಾಗಿ ಟ್ರಕ್ ನಜ್ಜುಗುಜ್ಜಾದ ಪರಿಣಾಮ ಸಿಕ್ಕಿ ಹಾಕಿಕೊಂಡಿದ್ದ ಚಾಲಕನನ್ನು ರಕ್ಷಿಸಲು ಸ್ಪೀಕರ್ ಯುಟಿ ಖಾದರ್ ಸಾರ್ವಜನಿಕರೊಂದಿಗೆ ಶ್ರಮಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಮಂಗಳೂರಿನ ಕಣ್ಣೂರು ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಚಾಲಕ ಅದೃಷ್ಟವಶಾತ್ ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದ.

ಆದರೆ ಟ್ರಕ್ ಗುದ್ದಿದ ರಭಸಕ್ಕೆ ಮುಂಬದಿ ಭಾಗ ಅಪ್ಪಚ್ಚಿಯಾಗಿದ್ದು, ಚಾಲಕನ ಕಾಲುಗಳು ಕೆಳಭಾಗದಲ್ಲಿ ಸಿಲುಕಿ ಹಾಕಿಕೊಂಡಿತ್ತು. ಹೊರಗೆ ಬರಬೇಕಾದ ಟ್ರಕ್ ಮುಂಭಾಗವನ್ನು ಎಳೆದು ಜಾಗ ಮಾಡಿಕೊಡಬೇಕಾಗಿತ್ತು.

ಹೀಗಾಗಿ ಸ್ಥಳೀಯರು ಡೋರ್ ಮತ್ತು ಮುಂಭಾಗವನ್ನು ಎಳೆದು ಚಾಲಕನಿಗೆ ಹೊರಬರಲು ಪ್ರಯತ್ನ ನಡೆಸುತ್ತಿದ್ದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಕೂಡಾ ಅವರೊಂದಿಗೆ ಸೇರಿಕೊಂಡಿದ್ದಾರೆ. ಸ್ಪೀಕರ್ ಸ್ಥಾನದಲ್ಲಿದ್ದರೂ ಸ್ಥಳೀಯರೊಂದಿಗೆ ಸೇರಿಕೊಂಡು ಗಾಯಾಳುವನ್ನು ರಕ್ಷಿಸಲು ಪ್ರಯತ್ನಿಸಿದ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಈ ವಿಡಿಯೋ ಇಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments