Select Your Language

Notifications

webdunia
webdunia
webdunia
webdunia

5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!

bangalore
ಐದು ವರ್ಷದ ಬಾಲಕನಿಗೆ ಕಲಬುರಗಿಯ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠನನ್ನು ಮಂಗಳವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಳೆದ ಸೋಮವಾರ ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಸ್ವಾಮೀಜಿ  ಹೃದಯಾಘಾತದಿಂದ ಲಿಂಗ್ಯಕ್ಯರಾಗಿದ್ದರು. ಆ ಹಿನ್ನೆಲೆಯಲ್ಲಿ ಬಾಲಕನಿಗೆ ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆದಿದ್ದು, 
ಲಿಂಗೈಕ್ಯರಾಗಿರೋ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಿಗೆ ಉತ್ತರಾಧಿಕಾರಿ ಪಟ್ಟ ನೀಡಲಾಗಿದೆ.
ಮಠದ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾ ಜಿಗಿತ: 38,792 ಕೊರೊನಾ ಸೋಂಕು ದೃಢ