Select Your Language

Notifications

webdunia
webdunia
webdunia
webdunia

5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!

5 ವರ್ಷದ ಬಾಲಕನಿಗೆ ಮಠದ ಉತ್ತರಾಧಿಕಾರಿ ಪಟ್ಟ!
bangalore , ಬುಧವಾರ, 14 ಜುಲೈ 2021 (14:02 IST)
ಐದು ವರ್ಷದ ಬಾಲಕನಿಗೆ ಕಲಬುರಗಿಯ ಕಾಳಗಿಯ ಸಂಸ್ಥಾನ ಹಿರೇಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಐದು ವರ್ಷದ ನೀಲಕಂಠಯ್ಯಸ್ವಾಮಿ ಹಿರೇಮಠನನ್ನು ಮಂಗಳವಾರ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕಳೆದ ಸೋಮವಾರ ಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯ ಸ್ವಾಮೀಜಿ  ಹೃದಯಾಘಾತದಿಂದ ಲಿಂಗ್ಯಕ್ಯರಾಗಿದ್ದರು. ಆ ಹಿನ್ನೆಲೆಯಲ್ಲಿ ಬಾಲಕನಿಗೆ ಮಠದ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.
ಅನೇಕ ಸ್ವಾಮೀಜಿಗಳ ಸಮ್ಮುಖದಲ್ಲಿ ಉತ್ತರಾಧಿಕಾರಿ ಪಟ್ಟದ ಪ್ರಕ್ರಿಯೆ ನಡೆದಿದ್ದು, 
ಲಿಂಗೈಕ್ಯರಾಗಿರೋ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರನ ಪುತ್ರನಿಗೆ ಉತ್ತರಾಧಿಕಾರಿ ಪಟ್ಟ ನೀಡಲಾಗಿದೆ.
ಮಠದ ಉತ್ತರಾಧಿಕಾರಿ ಸ್ಥಾನ ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಬಾಲಕನನ್ನು ಮಠದ ಉತ್ತರಾಧಿಕಾರಿ ಮಾಡಿರುವುದಾಗಿ ಸ್ವಾಮೀಜಿಗಳು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕೊರೊನಾ ಜಿಗಿತ: 38,792 ಕೊರೊನಾ ಸೋಂಕು ದೃಢ