Webdunia - Bharat's app for daily news and videos

Install App

ಮುಖ್ಯಮಂತ್ರಿ ಉತ್ತರ ಕನ್ನಡ ಭೇಟಿ ರದ್ದು

Webdunia
ಬುಧವಾರ, 13 ಜುಲೈ 2022 (22:04 IST)
ಕಳೆದ ಕೆಲ ದಿನಗಳಿಂದ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಉತ್ತರಕನ್ನಡ ಜಿಲ್ಲೆಗೆ ಇಂದು ಆಗಮಿಸಬೇಕಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ರದ್ದಾಗಿದೆ. ನಿನ್ನೆ ಸಿಎಂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ತೆರಳಿ ಮಳೆ ಹಾನಿ ವೀಕ್ಷಣೆ ನಡೆಸಿದ್ದರು. ಸದ್ಯ ಉಡುಪಿಯಲ್ಲಿ ನೆರೆ ಹಾನಿ ವೀಕ್ಷಣೆ ಮಾಡುತ್ತಿದ್ದು, ಬಳಿಕ 12 ಗಂಟೆಗೆ ರಸ್ತೆ ಮಾರ್ಗವಾಗಿ ಆಗಮಿಸಿ ಭಟ್ಕಳ ತಾಲೂಕಿನ ಗೊರಟೆಗೆ ತೆರಳಿ ಕಡಲ್ಕೊರೆತದ ಹಾನಿಯ ವೀಕ್ಷಣೆ ಮಾಡಬೇಕಿತ್ತು. ಆದರೆ ಉಡುಪಿಯಲ್ಲಿಯೇ ಹೆಚ್ಚಿನ ಸಮಯವಾಗುವ ಕಾರಣ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಹಾನಿಯಾಗಿಲ್ಲವೆಂದು ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎನ್ನಲಾಗಿದೆ. ಜಿಲ್ಲೆಯ ಅಧಿಕಾರಿಗಳನ್ನು ಉಡುಪಿಗೆ ಕರೆಸಿಕೊಂಡು ಅಲ್ಲಿಯೇ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments