ಉ.ಕರ್ನಾಟಕ ಅಭಿವೃದ್ಧಿ ಚರ್ಚೆಗೆ ಉ.ಕ ಭಾಗದ ಶಾಸಕರೇ ಗೈರು?

Webdunia
ಸೋಮವಾರ, 20 ನವೆಂಬರ್ 2017 (12:07 IST)
ವಿಧಾನಸಭೆ ಅಧಿವೇಶನದಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆಯುವ ಚರ್ಚೆಗೆ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರುಹಾಜರಾಗಿ ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದಲ್ಲಿರುವ 224 ಶಾಸಕರಲ್ಲಿ ಕೇವಲ 39 ಶಾಸಕರು ಸದನಕ್ಕೆ ಹಾಜರಾಗಿರುವುದು ಜನತೆಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುಳಿದ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಚರ್ಚೆಗಾಗಿ ದಿನ ನಿಗದಿ ಮಾಡಿದ್ದರೂ ಉತ್ತರ ಕರ್ನಾಟಕ ಭಾಗದ ಶಾಸಕರೇ ಗೈರು ಹಾಜರಾಗಿರುವುದು ಶಾಸಕರಿಗೆ ಅಭಿವೃದ್ಧಿ ಬಗ್ಗೆ ಕಾಳಜಿಯಿಲ್ಲ ಎನ್ನುವಂತಾಗಿದೆ ಎಂದು ಜನರು ಕಿಡಿಕಾರಿದ್ದಾರೆ
 
ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡಿ ವಿಧಾನಸಭೆ ಅಧಿವೇಶನ ನಡೆಸುತ್ತಿದ್ದರೂ ಶಾಸಕರು ಅದರ ಅರಿವಿಲ್ಲದಂತೆ ಶಾಸಕರು ವರ್ತಿಸುತ್ತಿರುವುದು ನೋಡಿದಲ್ಲಿ ಶಾಸಕರಿಂದಲೇ ಪ್ರಜಾಪ್ರಭುತ್ವಕ್ಕೆ ಮಸಿ ಬಳೆದಂತಾಗಿದೆ.  
 
ಉತ್ತರ ಕರ್ನಾಟಕ ಭಾಗದಲ್ಲಿ ಹಲವಾರು ಸಮಸ್ಯೆಗಳಿದ್ದರೂ ಸಮಸ್ಯೆಗಳಿಗೆ ಅಧಿವೇಶನದಲ್ಲಿ ಪರಿಹಾರ ಕಂಡುಕೊಳ್ಳುವ ಬದಲಿಗೆ  ಗೈರು ಹಾಜರಾಗಿ ತಮ್ಮ ಜನಪರ ಕಾಳಜಿ ಮೆರೆದಿದ್ದಾರೆ ಎಂದು ಜನರು ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಕೊನೆಗೂ ಸಂಚಾರಕ್ಕೆ ಸಿದ್ಧವಾದ ಪಿಂಕ್ ಲೈನ್‌, ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

ಎರಡು ಕ್ಷೇತ್ರಗಳ ಉಪಚುನಾವಣೆ: ಬಿಜೆಪಿ ಗೆಲುವು ಪಕ್ಕಾ ಎಂದಾ ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments