ಸಂಪುಟದಿಂದ ವಿ.ಶ್ರೀನಿವಾಸ್ ಪ್ರಸಾದ್ ಕೈಬಿಡದಂತೆ ಸಂಸದರ ಮನವಿ

Webdunia
ಶುಕ್ರವಾರ, 17 ಜೂನ್ 2016 (15:57 IST)
ಸಂಪುಟ ಪುನಾರಚನೆ ಸಂದರ್ಭದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಕೈಬಿಡಲಾಗುತ್ತದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ, ಅವರನ್ನು ಕೈಬಿಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಐವರು ಸಂಸದರು ಮನವಿ ಮಾಡಿದ್ದಾರೆ.
 
ಸಂಸದರಾದ ಮುದ್ದುಹನುಮೇಗೌಡ, ಚಂದ್ರಪ್ಪ ಅವರು ಜಂಟಿ ಹೇಳಿಕೆ ನೀಡಿ, ರಾಜ್ಯಕ್ಕೆ ಶ್ರೀನಿವಾಸ್ ಪ್ರಸಾದ್ ಅವರ ಸೇವೆ ಅಗತ್ಯವಾಗಿದ್ದರಿಂದ ಅವರನ್ನು ಸಂಪುಟದಿಂದ ಕೈಬಿಡಬಾರದು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕೋರಿದ್ದಾರೆ  
 
ಅಗತ್ಯವಾದಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರೊಂದಿಗೆ ಚರ್ಚೆ ನಡೆಸಲಾಗುವುದು. ತುಮಕೂರು ದೊಡ್ಡ ಜಿಲ್ಲೆಯಾಗಿದ್ದರಿಂದ ಕನಿಷ್ಠ ಎರಡು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
 
ಮುಂದಿನ ಎರಡು ವರ್ಷಗಳಲ್ಲಿ ವಿಧಾನಸಭೆಗೆ ಚುನಾವಣೆ ಎದುರಾಗಲಿರುವುದರಿಂದ ಸಚಿವ ಸಂಪುಟದಲ್ಲಿರುವ ಹಿರಿಯ ಸಚಿವರನ್ನು ಕೈಬಿಡುವುದು ಸೂಕ್ತವಾಗುವುದಿಲ್ಲ ಎನ್ನುವುದು ನಮ್ಮ ವೈಯಕ್ತಿಕ ಅನಿಸಿಕೆಯಾಗಿದೆ ಎಂದು ಹೇಳಿದ್ದಾರೆ.
 
ಸಂಪುಟ ಪುನಾರಚನೆಯಲ್ಲಿ ಕನಿಷ್ಠ 12 ರಿಂದ 15 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಮುಖಗಳಿಗೆ ಮಣೆಹಾಕಿ ಸರಕಾರದ ಯೋಜನೆಗಳಿಗೆ ವೇಗದ ಚಾಲನೆ ನೀಡಬೇಕು ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಿಂತನೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments