ಡಿಕೆ ಶಿವಕುಮಾರ್ ಎಲ್ಲಾ ಮಾಡುತ್ತಿರುವುದು ಮುಖ್ಯಮಂತ್ರಿ ಪಟ್ಟಕ್ಕಾಗಿ ಎಂದ ಸೋಮಣ್ಣ

Krishnaveni K
ಗುರುವಾರ, 9 ಮೇ 2024 (12:30 IST)
Photo Courtesy: Twitter
ಬೆಂಗಳೂರು: ರಾಜ್ಯದಲ್ಲಿ ಈಗ ಭಾರೀ ಸಂಚಲನ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಲು ಡಿಕೆ ಶಿವಕುಮಾರ್ ಕುಮ್ಮಕ್ಕು ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಇಂದು ಮಾಜಿ ಸಚಿವ, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಇಷ್ಟೆಲ್ಲಾ ಮಾಡುತ್ತಿರುವುದು ಸಿಎಂ ಕುರ್ಚಿ ಮೇಲಿನ ಆಸೆಯಿಂದ. ಅವರು ಮುಖ್ಯಮಂತ್ರಿಯಾಗಲಿ ಎಂದು ನನಗೂ ಆಸೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಇಷ್ಟೆಲ್ಲಾ ದುಡುಕುವುದು ಬೇಡ ಎಂದು ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಿಂಧ್ಯಾ ಮುಂತಾದವರೆಲ್ಲಾ ರಾಜಕೀಯಣದಲ್ಲಿ ಸಂಸ್ಕಾರವನ್ನು ಕಲಿತಿದ್ದೇ ದೇವೇಗೌಡರಿಂದ. ಪ್ರಜ್ವಲ್ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಅವರು ತಪ್ಪು ಮಾಡಿದರೂ ರಿಯಾಯಿತಿ ತೋರುವುದು ಬೇಡ. ಅವರು ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments