Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಎಲ್ಲಾ ಮಾಡುತ್ತಿರುವುದು ಮುಖ್ಯಮಂತ್ರಿ ಪಟ್ಟಕ್ಕಾಗಿ ಎಂದ ಸೋಮಣ್ಣ

Krishnaveni K
ಗುರುವಾರ, 9 ಮೇ 2024 (12:30 IST)
Photo Courtesy: Twitter
ಬೆಂಗಳೂರು: ರಾಜ್ಯದಲ್ಲಿ ಈಗ ಭಾರೀ ಸಂಚಲನ ಎಬ್ಬಿಸಿರುವ ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಲು ಡಿಕೆ ಶಿವಕುಮಾರ್ ಕುಮ್ಮಕ್ಕು ಕಾರಣ ಎಂಬ ಆರೋಪವಿದೆ. ಈ ಬಗ್ಗೆ ಇಂದು ಮಾಜಿ ಸಚಿವ, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಕೆ ಶಿವಕುಮಾರ್ ಇಷ್ಟೆಲ್ಲಾ ಮಾಡುತ್ತಿರುವುದು ಸಿಎಂ ಕುರ್ಚಿ ಮೇಲಿನ ಆಸೆಯಿಂದ. ಅವರು ಮುಖ್ಯಮಂತ್ರಿಯಾಗಲಿ ಎಂದು ನನಗೂ ಆಸೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟಕ್ಕಾಗಿ ಇಷ್ಟೆಲ್ಲಾ ದುಡುಕುವುದು ಬೇಡ ಎಂದು ಸೋಮಣ್ಣ ಟಾಂಗ್ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ, ಸಿಂಧ್ಯಾ ಮುಂತಾದವರೆಲ್ಲಾ ರಾಜಕೀಯಣದಲ್ಲಿ ಸಂಸ್ಕಾರವನ್ನು ಕಲಿತಿದ್ದೇ ದೇವೇಗೌಡರಿಂದ. ಪ್ರಜ್ವಲ್ ದೇವೇಗೌಡರ ಮೊಮ್ಮಗ ಎಂಬ ಕಾರಣಕ್ಕೆ ಅವರು ತಪ್ಪು ಮಾಡಿದರೂ ರಿಯಾಯಿತಿ ತೋರುವುದು ಬೇಡ. ಅವರು ತಪ್ಪು ಮಾಡಿದ್ದರೆ ಗಲ್ಲಿಗೇರಿಸಲಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments