Webdunia - Bharat's app for daily news and videos

Install App

ಲೋಕಸಭೆ ಟಿಕೆಟ್ ಅನುಮಾನ ಎಂಬಂತಿದ್ದ ಸೋಮಣ್ಣಗೆ ಈಗ ಸಚಿವ ಸ್ಥಾನದ ಲಾಟರಿ

Krishnaveni K
ಭಾನುವಾರ, 9 ಜೂನ್ 2024 (14:57 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿ. ಸೋಮಣ್ಣಗೆ ಟಿಕೆಟ್ ನೀಡುವುದೇ ಅನುಮಾನ ಎನ್ನುವ ಸ್ಥಿತಿಯಿತ್ತು. ಆದರೆ ಇದೀಗ ತುಮಕೂರಿನಿಂದ ಗೆದ್ದ ಸೋಮಣ್ಣಗೆ ಕೇಂದ್ರ ಸಚಿವರಾಗುವ ಯೋಗ ಕೂಡಿಬಂದಿದೆ.

ಈ ಬಾರಿ ಮೋದಿ ಸರ್ಕಾರದಲ್ಲಿ ರಾಜ್ಯ ಬಿಜೆಪಿಯ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ. ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ದರ್ಜೆ ಮತ್ತೊಮ್ಮೆ ಪ್ರಾಪ್ತಿಯಾಗಲಿದೆ. ಇನ್ನು, ಈ ಹಿಂದೆ ಕೇಂದ್ರದಲ್ಲಿ ರಾಜ್ಯ ಖಾತೆ ಸಚಿವೆಯಾಗಿ ಅನುಭವಿಯಾಗಿರುವ ಶೋಭಾ ಕರಂದ್ಲಾಜೆಗೆ ಈಗ ಮತ್ತೊಮ್ಮೆ ರಾಜ್ಯ ಖಾತೆ ಹೊಣೆ ಸಿಗಲಿದೆ.

ಇದಲ್ಲದೆ, ಅಚ್ಚರಿಯೆಂಬಂತೆ ವಿ. ಸೋಮಣ್ಣಗೆ ರಾಜ್ಯ ಖಾತೆ ಸಿಗುತ್ತಿದೆ. ತುಮಕೂರಿನಲ್ಲಿ ಈ ಬಾರಿ ಸೋಮಣ್ಣಗೆ ಲೋಕಸಭೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿತ್ತು. ಕಳೆದ ವಿಧಾನಸಭೆಯಲ್ಲಿ ಸೋತಿದ್ದ ಅವರಿಗೆ ಟಿಕೆಟ್ ನೀಡಬಾರದು ಎಂಬ ಕೂಗೂ ಇತ್ತು.

ಆದರೂ ಕೊನೆಗಳಿಗೆಯಲ್ಲಿ ಅವರಿಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕಿತ್ತು. ಅಷ್ಟೇ ಅಲ್ಲದೆ, ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಅದರ ಜೊತೆಗೆ ಈಗ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುತ್ತಿರುವುದು ಅವರಿಗೆ ಲಾಟರಿ ಹೊಡೆದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments