Webdunia - Bharat's app for daily news and videos

Install App

ಲೋಕಸಭೆ ಟಿಕೆಟ್ ಅನುಮಾನ ಎಂಬಂತಿದ್ದ ಸೋಮಣ್ಣಗೆ ಈಗ ಸಚಿವ ಸ್ಥಾನದ ಲಾಟರಿ

Krishnaveni K
ಭಾನುವಾರ, 9 ಜೂನ್ 2024 (14:57 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಯಕ ವಿ. ಸೋಮಣ್ಣಗೆ ಟಿಕೆಟ್ ನೀಡುವುದೇ ಅನುಮಾನ ಎನ್ನುವ ಸ್ಥಿತಿಯಿತ್ತು. ಆದರೆ ಇದೀಗ ತುಮಕೂರಿನಿಂದ ಗೆದ್ದ ಸೋಮಣ್ಣಗೆ ಕೇಂದ್ರ ಸಚಿವರಾಗುವ ಯೋಗ ಕೂಡಿಬಂದಿದೆ.

ಈ ಬಾರಿ ಮೋದಿ ಸರ್ಕಾರದಲ್ಲಿ ರಾಜ್ಯ ಬಿಜೆಪಿಯ ಮೂವರಿಗೆ ಸಚಿವ ಸ್ಥಾನ ದೊರೆಯಲಿದೆ. ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ದರ್ಜೆ ಮತ್ತೊಮ್ಮೆ ಪ್ರಾಪ್ತಿಯಾಗಲಿದೆ. ಇನ್ನು, ಈ ಹಿಂದೆ ಕೇಂದ್ರದಲ್ಲಿ ರಾಜ್ಯ ಖಾತೆ ಸಚಿವೆಯಾಗಿ ಅನುಭವಿಯಾಗಿರುವ ಶೋಭಾ ಕರಂದ್ಲಾಜೆಗೆ ಈಗ ಮತ್ತೊಮ್ಮೆ ರಾಜ್ಯ ಖಾತೆ ಹೊಣೆ ಸಿಗಲಿದೆ.

ಇದಲ್ಲದೆ, ಅಚ್ಚರಿಯೆಂಬಂತೆ ವಿ. ಸೋಮಣ್ಣಗೆ ರಾಜ್ಯ ಖಾತೆ ಸಿಗುತ್ತಿದೆ. ತುಮಕೂರಿನಲ್ಲಿ ಈ ಬಾರಿ ಸೋಮಣ್ಣಗೆ ಲೋಕಸಭೆ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೊಂದಲಗಳಿತ್ತು. ಕಳೆದ ವಿಧಾನಸಭೆಯಲ್ಲಿ ಸೋತಿದ್ದ ಅವರಿಗೆ ಟಿಕೆಟ್ ನೀಡಬಾರದು ಎಂಬ ಕೂಗೂ ಇತ್ತು.

ಆದರೂ ಕೊನೆಗಳಿಗೆಯಲ್ಲಿ ಅವರಿಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕಿತ್ತು. ಅಷ್ಟೇ ಅಲ್ಲದೆ, ಈ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಅದರ ಜೊತೆಗೆ ಈಗ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುತ್ತಿರುವುದು ಅವರಿಗೆ ಲಾಟರಿ ಹೊಡೆದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments