Webdunia - Bharat's app for daily news and videos

Install App

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

Krishnaveni K
ಮಂಗಳವಾರ, 17 ಜೂನ್ 2025 (15:48 IST)
ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದ ದುರಂತ, 11 ಜನರ ಸಾವಿನ ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಮತ್ತು ಈ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕು ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಅವರು ಒತ್ತಾಯಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಲ್ತುಳಿತದ ಮೂಲಕ 11 ಜನ ಅಮಾಯಕ ಯುವಜನರ ಸಾವಿನ ಚರ್ಚೆಯನ್ನು ಜಾತಿ ಗಣತಿ ಮಾಡಿಸುವುದಾಗಿ ಪ್ರಕಟಿಸಿ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ಆಕ್ಷೇಪಿಸಿದರು. ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಇವತ್ತು ಪ್ರತಿಭಟನೆ ಮುಂದುವರೆಸಿದ್ದೇವೆ ಎಂದು ವಿವರಿಸಿದರು.

ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಪೈಪೋಟಿಯ ರೂಪದಲ್ಲಿ ಸಂಭ್ರಮದಲ್ಲಿ ನಾ ಮುಂದು ನಾ ಮುಂದು ಎಂಬಂತೆ ಪಾಲ್ಗೊಂಡಿದ್ದರು. ವಿಧಾನಸೌಧದಲ್ಲಿ ಒಬ್ಬರು, ವಿಮಾನನಿಲ್ದಾಣದಲ್ಲಿ ಒಬ್ಬರು, ಸ್ಟೇಡಿಯಂನಲ್ಲಿ ಒಬ್ಬರು ಎಂಬಂತೆ ಪೈಪೋಟಿ ನಡೆದಿತ್ತು ಎಂದು ತಿಳಿಸಿದರು. ಈಗ ನನಗೇನೂ ಸಂಬಂಧ ಇಲ್ಲ ಎಂಬ ವಾತಾವರಣ ಸೃಷ್ಟಿಸಿ ಇನ್ನೊಬ್ಬರ ಹೆಗಲ ಮೇಲೆ ಹಾಕುವ ವಾತಾವರಣ ಸೃಷ್ಟಿಸಿದ್ದಾರೆ ಎಂದು ಟೀಕಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments