Webdunia - Bharat's app for daily news and videos

Install App

ಮೀಸಲಾತಿ ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ: ಸುನೀಲ್‍ಕುಮಾರ್

Krishnaveni K
ಬುಧವಾರ, 11 ಸೆಪ್ಟಂಬರ್ 2024 (16:04 IST)
ಬೆಂಗಳೂರು: ತಲತಲಾಂತರದಿಂದ ಮೀಸಲಾತಿ ಮೂಲಕ ಏಳಿಗೆ ಕಂಡ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯವು ಮೀಸಲಾತಿ ರದ್ದತಿ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಯಿಂದ ಗಾಬರಿ ಆಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಅವರು ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೆ ಮೀಸಲಾತಿಯನ್ನು ರದ್ದು ಮಾಡಿಬಿಡುತ್ತಿತ್ತೇನೋ ಎಂಬಷ್ಟು ಆತಂಕ ನಿರ್ಮಾಣವಾಗಿದೆ. ಈ ಹೇಳಿಕೆಯನ್ನು ಖಂಡಿಸುತ್ತೇವೆ. ಮೀಸಲಾತಿಯನ್ನು ರದ್ದು ಮಾಡಲು ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮೀಸಲಾತಿಗೆ ನಾವು ಇವತ್ತು ಕೂಡ ಬದ್ಧರಿದ್ದೇವೆ. ಅದು ಮುಂದುವರೆಯಲಿದೆ. ರಾಹುಲ್ ಗಾಂಧಿಯವರ ಹೇಳಿಕೆಯನ್ನು ಈ ದೇಶದ ಜನರು ಸಮರ್ಥಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ರಾಹುಲ್ ಅವರು ದೇಶದ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮೀಸಲಾತಿ ವಿರೋಧಿ ಎಂಬ ವಿಷಯವನ್ನು ಇಟ್ಟುಕೊಂಡು ನಾಳೆಯಿಂದ ಇಡೀ ರಾಜ್ಯಾದ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಯನ್ನು ಮಾಡಲು ಕರೆ ಕೊಡಲಾಗಿದೆ ಎಂದು ಹೇಳಿದರು. ರಾಹುಲ್ ಗಾಂಧಿಯವರು ಅಮೆರಿಕದಿಂದ ವಾಪಸ್ ಬರುವುದರ ಒಳಗೆ ಕಾಂಗ್ರೆಸ್ ಇದಕ್ಕೆ ಪಶ್ಚಾತ್ತಾಪದ ಹೇಳಿಕೆ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ಮೀಸಲಾತಿಗೆ ಸಂಬಂಧಿಸಿ ಕೇವಲ ಮೊಸಳೆಕಣ್ಣೀರನ್ನು ಇಲ್ಲಿನವರೆಗೆ ಕಾಂಗ್ರೆಸ್ ಸುರಿಸಿದೆ. ಸಂವಿಧಾನದ ಕುರಿತು ಕಾಂಗ್ರೆಸ್ ಕೇವಲ ಭಾಷಣ ಮಾಡಿದೆ. ಕೈನಲ್ಲಿ ಸಂವಿಧಾನದ ಪುಸ್ತಕ ಮಾತ್ರ ಹಿಡಿದುಕೊಂಡಿದ್ದರು. ಆದರೆ, ಮನಸ್ಸಿನಲ್ಲಿ ಸಂವಿಧಾನ ವಿರೋಧಿ ಚಟುವಟಿಕೆಯನ್ನೇ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments