Webdunia - Bharat's app for daily news and videos

Install App

ಕೇಂದ್ರ ಸರಕಾರದ ಟೀಕೆಯೇ ಕಾಂಗ್ರೆಸ್ ಸರಕಾರದ ಅಜೆಂಡ: ವಿ.ಸುನೀಲ್‍ಕುಮಾರ್

Krishnaveni K
ಶುಕ್ರವಾರ, 23 ಆಗಸ್ಟ್ 2024 (16:36 IST)
ಬೆಂಗಳೂರು: ಬೆಲೆ ಏರಿಕೆ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವುದು ಈ ಕಾಂಗ್ರೆಸ್ ಸರಕಾರದ ಅಜೆಂಡ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ಅವರು ಟೀಕಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಆರಂಭದ ದಿನದಿಂದಲೂ ಜನಪರ ಯೋಜನೆಗಳನ್ನು ಮಾಡಲೇ ಇಲ್ಲ ಎಂದು ಆಕ್ಷೇಪಿಸಿದರು.

ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಸರಕಾರದಲ್ಲಿ ಒಂದು ರೀತಿಯ ರಾಜಕೀಯ ಅಸ್ಥಿರತೆ ಕಾಣುತ್ತಿದೆ. ಸ್ವತಃ ಮುಖ್ಯಮಂತ್ರಿಗಳು ಕುರ್ಚಿ ಉಳಿಸಿಕೊಳ್ಳಲು ಪ್ರಯತ್ನದಲ್ಲಿದ್ದಾರೆ. ಸಿಎಂ ಸೇರಿ ಉಳಿದೆಲ್ಲ ಸಚಿವರೂ ಜನಕಲ್ಯಾಣದ ಯೋಜನೆಗಳನ್ನು ಕೈಬಿಟ್ಟಿದ್ದು, ಕೋಮಾ ಪರಿಸ್ಥಿತಿಯಲ್ಲಿ ಸರಕಾರ ಇದೆ ಎಂದು ಟೀಕಿಸಿದರು. ಸಚಿವರು ಜಿಲ್ಲಾ ಪ್ರವಾಸ ನಡೆಸುತ್ತಿಲ್ಲ; ಸಭೆಗಳನ್ನೂ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿದರು.

ಜನರ ಬವಣೆಗಳನ್ನು ಕೇಳದೇ ಇರುವ ಸ್ಥಿತಿ ಎಲ್ಲ ಜಿಲ್ಲೆ, ಎಲ್ಲ ತಾಲ್ಲೂಕುಗಳಲ್ಲಿದೆ. ಸರಕಾರವೊಂದು ಜೀವಂತವಾಗಿದೆ ಎಂದು ಅನಿಸುತ್ತಿಲ್ಲ. ಆಡಳಿತ ಪಕ್ಷದ ಸದಸ್ಯರೇ ಬೇರೆಬೇರೆ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಜನರ ಪರವಾಗಿ ಯೋಚಿಸದ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾದುದು ಶೋಚನೀಯ ಎಂದು ತಿಳಿಸಿದರು.

ನಾವು ರಾಜ್ಯ ಸರಕಾರ ಪತನ ಆಗಬೇಕೆಂದು ಬಯಸುತ್ತಿಲ್ಲ. ಗುರುತರ ಆರೋಪಕ್ಕೆ ಒಳಗಾದ ಮುಖ್ಯಮಂತ್ರಿಗಳು ತನಿಖೆ ಮುಗಿಯುವವರೆಗೆ ರಾಜೀನಾಮೆ ಕೊಡಬೇಕು ಹಾಗೂ ತನಿಖೆ ಎದುರಿಸಲಿ ಎಂದು ನಾವು ಆಗ್ರಹಿಸುತ್ತಿದ್ದೇವೆ ಎಂದು ವಿ.ಸುನೀಲ್‍ಕುಮಾರ್ ಅವರು ಸ್ಪಷ್ಟಪಡಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments