Webdunia - Bharat's app for daily news and videos

Install App

ಸಿಟಿ ಮಾರ್ಕೆಟ್​ನಲ್ಲಿ ‘ವ್ಯಾಕ್ಸಿನ್ ಹಾಕ್ಸಿಕೊಳೀ-ವ್ಯಾಕ್ಸಿನ್ ಹಾಕಿಸಿಕೊಳ್ಳಿ’ ಅಂತಾ ಅನೌನ್ಸ್​ಮೆಂಟ್​!

Webdunia
ಗುರುವಾರ, 2 ಡಿಸೆಂಬರ್ 2021 (20:31 IST)
ಈ ಬೆಳವಣಿಗೆಗಳ ಮಧ್ಯೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಇಂದು ಅಥವಾ ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಬಿಬಿಎಂಪಿ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎಂದು  ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಬೆಂಗಳೂರು: ಮಾರ್ಕೆಟ್​ ಅದೂ ಸಿಟಿ ಮಾರ್ಕೆಟ್​ ಅಂದ ಮೇಲೆ ಅಲ್ಲಿ ತಗೊಳ್ಳೀ ತಗೊಳ್ಳೀ… ರೂಪಾಯಿಗೆ ಒಂದು ಅಂತಾ ಕೂಗ್ತಾನೇ ಇರ್ತಾರೆ. ಆದರೆ ಬದಲಾದ ಕಾಲಮಾನದಲ್ಲಿ ಕೊರೊನಾ ಮಹಾಮಾರಿಗೆ ಅಂಜಿ ಸರ್ಕಾರ ಅನ್ನು ಕಟ್ಟಿಹಾಕಲು ಸರ್ವಪ್ರಯತ್ನ ಮಾಡುತ್ತಿದೆ. ಮಾರ್ಕೆಟ್ ನಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಿ-ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಈಗ ಅನೌನ್ಸ್ ಮಾಡ್ತಿದ್ದಾರೆ. ಜೊತೆಗೆ ಮಾರ್ಕೆಟ್ ಒಳಗಡೆಯೇ ವ್ಯಾಕ್ಸಿನ್​ ಹಾಕುತ್ತಾ ಇದ್ದಾರೆ, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಬಿಬಿಎಂಪಿಯಿಂದ ನಿಯುಕ್ತಿಗೊಂಡ ಮಾರ್ಷಲ್ ಗಳು ಅನೌನ್ಸ್​ಮೆಂಟ್ ಕೊಡ್ತಿದ್ದಾರೆ.ಮುಂದಿನ ದಿನಗಳಲ್ಲಿ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ವ್ಯಾಕ್ಸಿನ್ ಸರ್ಟಿಫಿಕೇಟ್ ಕೇಳ್ತಾರೆ ಹಾಗಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಅನೌನ್ಸ್ ಮಾಡಿದ್ದಾರೆ. ಹಾಗಾದರೆ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡಲಿಕ್ಕೆ ವ್ಯಾಕ್ಸಿನ್ ಸರ್ಟಿಫಿಕೇಟ್ ಕಡ್ಡಾಯವಾ? ಬಿಬಿಎಂಪಿ ಹೊರ ರೂಲ್ಸ್ ಮಾಡಲಿಕ್ಕೆ ಹೊರಟಿದೆಯಾ ? ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಇದ್ದರೆ ಮಾತ್ರ ಖರೀದಿ/ ವ್ಯಾಪಾರಕ್ಕೆ ಅವಕಾಶ ನಾ ? ಹೀಗೆ ಅಚ್ಚರಿ ಮೂಡಿಸಿದೆ ಮಾರ್ಷಲ್ ಗಳ ಮೈಕ್ ಅನೌನ್ಸ್ ಮೆಂಟ್. ಇದರ ಮಧ್ಯೆ, ಕೆ.ಆರ್ ಮಾರ್ಕೆಟ್ ವ್ಯಾಪಾರಿಗಳಿಗೆ ವ್ಯಾಕ್ಸಿನೇಷನ್‌ ಶುರು ಮಾಡಲಾಗಿದೆ. ಬಸ್ ಸ್ಟಾಂಡ್ , ಮಾರ್ಕೆಟ್, ರೈಲ್ವೆ ಸ್ಟೇಷನ್ ಸ್ಥಳಗಳಲ್ಲಿ ವ್ಯಾಕ್ಸಿನೇಷನ್‌ ಡ್ರೈವ್ ಗೆ ತಙ್ಞರ ಸಮಿತಿ ಸಲಹೆ ನೀಡಿತ್ತು. ತಙ್ಞರ ಸಲಹೆಯಂತೆ ವ್ಯಾಕ್ಸಿನೇಷನ್‌ ಶುರು ಮಾಡಲಾಗಿದೆ ಅನ್ನುತ್ತಿದ್ದಾರೆ ಮಾರ್ಷಲ್ ಗಳು.
 
ಈ ಬೆಳವಣಿಗೆಗಳ ಮಧ್ಯೆ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಇಂದು ಅಥವಾ ನಾಳೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಬೀಳುವ ಸಾಧ್ಯತೆಯಿದೆ. ಬಿಬಿಎಂಪಿ ಪ್ರಸ್ತಾವನೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದೆ ಎಂದು ಟಿವಿ9ಗೆ ಬಿಬಿಎಂಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
 
ಅಂತಹ ಯಾವುದೇ ಶಿಫಾರಸು ಒಪ್ಪುವುದಿಲ್ಲ: ಆರೋಗ್ಯ ಸಚಿವ ಡಾ. ಸುಧಾಕರ್
ಇನ್ನು ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಇಂತಹ ಯಾವುದೇ ಶಿಫಾರಸು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರೊಲ್ಲ. ಆಂದೋಲನ ಮಾಡಿ ಲಸಿಕೆ ಕೊಡ್ತೀವಿ. ಇನ್ನು, ಕ್ರಿಸ್ ಮಸ್ ಹಾಗೂ ವರ್ಷಾಚರಣೆ ಗೆ ನಿರ್ಬಂಧ ವಿಚಾರವಾಗಿ ಅಗತ್ಯವಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ಲಸಿಕಾ ಮಿತ್ರ ಹೆಸರಿನಲ್ಲಿ ಲಸಿಕೆ ನೀಡಲಾಗ್ತಿದೆ: ಆರೋಗ್ಯ ಸಚಿವ ಡಾ. ಸುಧಾಕರ್
ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಮನೆ ಮನೆಗೆ ಲಸಿಕೆ ನೀಡುವ ಕೆಲಸ ಮಾಡ್ತಿದ್ದೇವೆ‌. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಲಸಿಕೆ ನೀಡಲಾಗ್ತಿದೆ. ಲಸಿಕಾ ಮಿತ್ರ ಹೆಸರಿನಲ್ಲಿ ಲಸಿಕೆ ನೀಡಲಾಗ್ತಿದೆ. ಅತ್ಯಂತ ಯಶಸ್ವಿಯಾಗಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದೂ ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments