ಪೋಸ್ಟರ್ ಮಾತ್ರ ಕಾಣಿಸುತ್ತೆ, ಲಸಿಕೆ ಮಾತ್ರ ಇಲ್ಲ: ಯುಟಿ ಖಾದರ್ ವ್ಯಂಗ್ಯ

Webdunia
ಮಂಗಳವಾರ, 20 ಜುಲೈ 2021 (16:21 IST)
ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಜನರಿಗೆ ಉಚಿತ ಲಸಿಕೆ ನೀಡುತ್ತೇವೆ ಅಂತಾರೆ. ಆದರೆ ಉಚಿತ ಲಸಿಕೆಯ ಪೋಸ್ಟ್ ಮಾತ್ರ ಜನರ ಕಣ್ಣಿಗೆ ಕಾಣುತ್ತಿವೆ ಹೊರತು ಈವರೆಗೆ ಉಚಿತ ಲಸಿಕೆ ಮಾತ್ರ ಜನರಿಗೆ ಸಿಗುತ್ತಿಲ್ಲ ಎಂದು ಕಿಡಿಕಾರಿದರು.
ಸರಕಾರದಿಂದ ಬರೀ ಆದೇಶಗಳು ಮಾತ್ರ ಜಾರಿಯಾಗುತ್ತಿವೆ. ಒಂದೂವರೆ ಲಕ್ಷದ ಲಸಿಕೆಯ ಅವಶ್ಯಕತೆ ನಮ್ಮ ಜಿಲ್ಲೆಗೆ ಇದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕೂಡಲೇ ಕ್ರಮ ವಹಿಸಬೇಕು. ಸರಕಾರ ತಮ್ಮ ರಾಜಕೀಯ ಆಟದಲ್ಲಿ ಮಗ್ನರಾಗಿ ಲಸಿಕೆ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಖಾದರ್ ಆರೋಪಿಸಿದರು.
ಇನ್ನು ಮಂಗಳೂರಲ್ಲಿ ಅವತ್ತು ರಾಜ್ಯಮಟ್ಟದ ಬಿಜೆಪಿ ಕಾರ್ಯಕಾರಿಣಿ‌ ಸಭೆ ನಡೆಯ್ತು. ಅವತ್ತು‌ ನಾವೆಲ್ಲಾ ಆ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ‌ಬಗ್ಗೆ ಚರ್ಚೆಯಾಗುತ್ತದೆ, ರಾಜ್ಯಕ್ಕೆ ಏನಾದ್ರೂ ಕೊಡುಗೆ ಸಿಗುತ್ತದೆ ಎಂದು ಭಾವಿಸಿದ್ದೇವು. ಈ ಸಭೆಗೆ ಭಾರೀ ಪ್ರಚಾರ ಕೂಡಾ ಕೊಡಲಾಯಿತು. ಆದ್ರೆ ಸಭೆ ಮುಗಿದ ಸಂಜೆ ಮಾತ್ರ ನಾವು ಲವ್ ಜಿಹಾದ್ ತಡೆ ಕಾನೂನು ತರುತ್ತೀವಿ ಎಂದು ತೀರ್ಮಾನ ಮಾಡಿದ್ದೀವಿ ಅಂತಾ ಹೇಳಿ ಹೋರಟವರು ಎಲ್ಲಿಗೆ ಹೋದ್ರು ಎಂದು ಮಾಜಿ ಸಚಿವ ಯುಟಿ ಖಾದರ್ ಪ್ರಶ್ನೆ ಮಾಡಿದರು. ಈಗ ಯುಪಿಯಲ್ಲಿ ಚುನಾವಣೆ ಬರುತ್ತೆ ಎಂದು ಹೊಸ ಸಬ್ಜೆಕ್ಟ್ ಹುಡುಕಿದ್ದಾರೆ. ಆಗ ಸಿಟಿ ರವಿ ಇರಲಿಲ್ವಾ ಎಂದು ಪ್ರಶ್ನೆ ಮಾಡಿದ ಅವರು ದೇಶದ ಕಾನೂನು ಎಲ್ಲರಿಗೆ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.
ಇನ್ನು ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ.‌ ಒಂದು ಸರ್ಕಾರವು ಆಡಳಿತ ಮಾಡೋ‌ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗ ಪ್ರಧಾನಿ ನರೇಂದ್ರ ಮೋದಿ ನೀಡಿದ ಗಿಫ್ಟ್‌ ವಿಶೇಷತೆ ಏನು ಗೊತ್ತಾ

ಬೈಕ್ ನಲ್ಲಿ ಹೋಗುತ್ತಿದ್ದಾಗ ಚಿರತೆ ಅಟ್ಯಾಕ್: ಯುವಕ ಮಾಡಿದ ಕೆಲಸಕ್ಕೆ ಚಿರತೆಗೆ ಫುಲ್ ನಡುಕ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments