Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಲಸಿಕೆ ಕೊರತೆ ಇದೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ

Webdunia
ಶುಕ್ರವಾರ, 2 ಜುಲೈ 2021 (16:11 IST)
ಬೆಂಗಳೂರಿನಲ್ಲಿ ಪ್ರಸ್ತುತ ಕೊರೊನಾ ಲಸಿಕೆಯ ಕೊರೊತೆ ಇದೆ ಎಂದು ಬೃಹತ್ ಬೆಂಗಳೂರು ನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಪ್ರತಿದಿನ 1.5 ಲಕ್ಷ ಲಸಿಕೆ ಬೇಡಿಕೆಯಿದೆ. ನಮಗೆ ಸಿಗುತ್ತಿರುವುದು 40 ಸಾವಿರ 50 ಸಾವಿರ ಲಸಿಕೆಗಳಷ್ಟೇ ಲಭ್ಯವಿದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಸಹ ಸುಮಾರು 40 ಸಾವಿರ ಲಸಿಕೆ ಹಾಕಲಾಗುತ್ತಿದೆ. ಕಾಲೇಜ್ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಇದ್ದರೆ ಮಾತ್ರ ಪ್ರವೇಶ ಎಂಬ ನಿಯಮವೇನಿಲ್ಲ. ಅಂತಹ ನಿಯಮ ಮಾಡಿಲ್ಲ. ನಿನ್ನೆ 61 ಕಾಲೇಜ್ ಗಳ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯ ಸರಕಾರ 5ರಿಂದ ಅನ್ ಲಾಕ್ 3 ಘೋಷಿಸಿದರೆ ಆ ತೀರ್ಮಾನಕ್ಕೆ ಬದ್ಧ. ಸಿನಿಮಾ ಟಾಕೀಸ್, ಮಾಲ್ ತೆರೆಯುವ ಬಗ್ಗೆ ಅನುಮತಿ ನೀಡಿದರೆ ನಾವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತೆರೆಯಲು ಅವಕಾಶ ನೀಡುತ್ತೇವೆ ಎಂದು ಗೌರವ್ ಗುಪ್ತ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments