Select Your Language

Notifications

webdunia
webdunia
webdunia
webdunia

ವೈಕುಂಠ ಏಕಾದಶಿ: ತಿರುಪತಿಯಲ್ಲಿ ಭಕ್ತರಿಗೆ 10 ದಿನ ದರ್ಶನ್, ಇಸ್ಕಾನ್ ದೇಗುಲಕ್ಕೆ ಪ್ರವೇಶ ನಿರ್ಬಂಧ

ವೈಕುಂಠ ಏಕಾದಶಿ: ತಿರುಪತಿಯಲ್ಲಿ ಭಕ್ತರಿಗೆ 10 ದಿನ ದರ್ಶನ್, ಇಸ್ಕಾನ್ ದೇಗುಲಕ್ಕೆ ಪ್ರವೇಶ ನಿರ್ಬಂಧ
ತಿರುಪತಿ , ಮಂಗಳವಾರ, 11 ಜನವರಿ 2022 (21:05 IST)
ತಿರುಮಲ ತಿರುಪತಿ ತಿಮ್ಮಪ್ಪನ ದೇಗುಲದಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ. ಜನವರಿ 14 ರಂದು ವೈಕುಂಠ ದ್ವಾದಶಿ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭದಲ್ಲಿ ಬುಧವಾರ ಮಧ್ಯರಾತ್ರಿ ನಂತರ ವೈಕುಂಠ ದ್ವಾರಗಳು ತೆರೆಯಲಿವೆ. ಧನುರ್ಮಾಸದ ಸಂದರ್ಭದಲ್ಲಿ, 12 ರಂದು ಮಧ್ಯರಾತ್ರಿ ನಂತರ ಏಕಾಂತದಲ್ಲಿ ಧನುರ್ಮಾಸ ವಿಧಿಗಳನ್ನು ಅರ್ಚಕರು ನಿರ್ವಹಿಸಲಿದ್ದಾರೆ. ನಂತರ 1.45 ಗಂಟೆಗೆ ಭಕ್ತಾದಿಗಳು ವೈಕುಂಠ ದ್ವಾರ ದರ್ಶನಕ್ಕೆ ಅನುಮತಿ ನೀಡಲಿದ್ದಾರೆ.
ತಿರುಮಲದ ಇತಿಹಾಸದಲ್ಲಿಯೇ ಕಳೆದ ವರ್ಷ ಮೊದಲ ಬಾರಿಗೆ ಹತ್ತು ದಿನಗಳ ಕಾಲ ವೈಕುಂಠ ದ್ವಾರ ತೆರೆದು ಭಕ್ತರಿಗೆ ದರ್ಶನ ಕಲ್ಪಿಸಿತ್ತು. ಈ ಬಾರಿಯೂ ಇದೇ 13 ರಿಂದ 22ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲು ಟಿಟಿಡಿ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಟಿಟಿಡಿ ಈಗಾಗಲೇ ಭಕ್ತರಿಗೆ 300 ರೂಪಾಯಿ ವಿಶೇಷ ಪ್ರವೇಶ ದರ್ಶನ, ಟೈಮ್‌ ಸ್ಲಾಟ್‌ ಸರ್ವ ದರ್ಶನ ಟೋಕನ್, ಶ್ರೀವಾಣಿ ಬ್ರೇಕ್ ದರ್ಶನ ಟಿಕೆಟ್, ವರ್ಚುವಲ್ ಸೇವಾ ಟಿಕೆಟ್‌ಗಳನ್ನು ನಿಗದಿಪಡಿಸಿದೆ.
ಇನ್ನೊಂದೆಡೆ 13 ರಂದು ಬೆಳಗ್ಗೆ 9 ರಿಂದ 10ರವರೆಗೆ ಶ್ರೀದೇವಿ- ಭೂದೇವಿ ಸಮೇತ ಮಲಯಪ್ಪಸ್ವಾಮಿಯ ಸ್ವರ್ಣ ರಥ ದೇವಸ್ಥಾನದ ಆವರಣದಲ್ಲಿ ಮೆರವಣಿಗೆ ನಡೆಯಲಿದೆ. ವೈಕುಂಠ ಏಕಾದಶಿ ನಿಮಿತ್ತ ಮಂಗಳವಾರ ತಿಮ್ಮಪ್ಪ ದೇಗುಲದಲ್ಲಿ ತಿರುಮಂಜನ (ದೇವಸ್ಥಾನದ ಶುದ್ಧೀಕರಣ) ನಡೆಯಲಿದೆ. ಬಳಿಕ ಭಕ್ತರಿಗೆ ದರ್ಶನ ಪ್ರಾರಂಭವಾಗುತ್ತದೆ.
 
ಇಸ್ಕಾನ್ ದೇವಳಕ್ಕೆ ನಿರ್ಬಂಧ:
ಇನ್ನು ವೈಕುಂಠ ಏಕಾದಶಿಯಂದು ಬೆಂಗಳೂರಿನ ಇಸ್ಕಾನ್ ದೇವಸ್ಥಾನಕ್ಕೆ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶ ನಿಷೇಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಫಿನಾಡಲ್ಲಿ ಸ್ಕಾರ್ಫ್, ಕೇಸರಿ ಶಲ್ಯ ವಿವಾದ – ಪೋಷಕರ ಸಭೆಯಲ್ಲಿ ಇತ್ಯರ್ಥ