Webdunia - Bharat's app for daily news and videos

Install App

ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ

sampriya
ಶುಕ್ರವಾರ, 7 ಜೂನ್ 2024 (10:10 IST)
Photo By X
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 94.73 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದ ಬಿಸಿ ಏರುತ್ತಿದ್ದ ಹಾಗೇ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಗುರುವಾರ ಸ್ವ ಇಚ್ಛೆಯಿಂದ  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಒತ್ತಾಯಿಸಿದ್ದರು. ಅದಲ್ಲದೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧದಿಂದ ರಾಜಭವನವರೆಗೆ ತೆರಳಿ, ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ಇನ್ನೂ ಈ ಪ್ರಕರಣದ ಬಿಸಿ ಜೋರಾಗುತ್ತಿದ್ದ ಹಾಗೇ  ‌ಮುಖ್ಯಮಂತ್ರಿ ಅವರನ್ನು ಗುರುವಾರ ರಾತ್ರಿ ಭೇಟಿ ಮಾಡಿದ ನಾಗೇಂದ್ರ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ರಾಜೀನಾಮೆ ನೀಡುವುದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಂದ್ರ, ‘ಇಡೀ
ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಯಾರ ಒತ್ತಡವೂ ಇಲ್ಲದೆ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಲು ನಿರ್ಧರಿಸಿ, ಮುಖ್ಯಮಂತ್ರಿ ಬಳಿ ಸಮಯ ಕೇಳಿದಾಗ ಸಂಜೆ 7.30ಕ್ಕೆ ಬರಲು ಹೇಳಿದರು. ಯಾರಿಗೂ ಮುಜುಗರ ಆಗಬಾರದೆಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನ ತೆಗೆದುಕೊಂಡೆ’ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments