Webdunia - Bharat's app for daily news and videos

Install App

ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ, ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ

Krishnaveni K
ಬುಧವಾರ, 10 ಜುಲೈ 2024 (10:39 IST)
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ನಾಗೇಂದ್ರ, ನಿಗಮ ಅಧ್ಯಕ್ಷ ಬಸನೌಡ ದದ್ದಲ್ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಎಸ್ಐಟಿ ತನಿಖೆ ಬೆನ್ನಲ್ಲೇ ಇಡಿ ದಾಳಿ ನಡೆಸಿದೆ.

ಇಂದು ಬೆಳಿಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಮತ್ತು ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ ರಸ್ತೆ ಮತ್ತು ಬೆಂಗಳೂರಿನ ಯಲಹಂಕದಲ್ಲಿರುವ ದದ್ದಲ್ ಮನೆ ಮೇಲೆ ಬೆಳಿಗ್ಗೆ 7 ಗಂಟೆಗೇ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರವಷ್ಟೇ ಎಸ್ಐಟಿ ಅಧಿಕಾರಿಗಳು ದದ್ದಲ್ ರನ್ನು ವಿಚಾರಣೆಗೊಳಪಡಿಸಿದ್ದರು. ಇದರ ಬೆನ್ನಲ್ಲೇ ದದ್ದಲ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಾಲ್ಮೀಕಿ ಹಗರಣದಲ್ಲಿ 187 ಕೋಟಿ ರೂ. ಅಕ್ರಮವಾಗಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿತ್ತು. ಇದರ ಬಗ್ಗೆ ಈಗ ಎಸ್ ಐಟಿ ವಿಚಾರಣೆ ನಡೆಸುತ್ತಿದೆ. ಈ ಹಗರಣ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿತ್ತು. ಸಚಿವರಾಗಿದ್ದ ನಾಗೇಂದ್ರ ತಲೆದಂಡವಾಗಿತ್ತು.

ಕೇವಲ ದದ್ದಲ್ ಮಾತ್ರವಲ್ಲ, ಮಾಜಿ ಸಚಿವ ನಾಗೇಂದ್ರ ಮನೆ ಮೇಲೂ ದಾಳಿ ನಡೆಸಲಾಗಿದೆ. ಹಗರಣದಲ್ಲಿ ಪ್ರಮುಖವಾಗಿ ಸಚಿವರ ಹೆಸರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ರಾಜಕೀಯ ಒತ್ತಡಕ್ಕೆ ಮಣಿದು ನಾಗೇಂದ್ರ ರಾಜೀನಾಮೆ ನೀಡಬೇಕಾಯಿತು. ಬಳ್ಳಾರಿಯ ನೆಹರೂ ಕಾಲೊನಿಯಲ್ಲಿರುವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ ನಾಗೇಂದ್ರ ಅವರ ಫ್ಲ್ಯಾಟ್ ಇದ್ದು, ಇಲ್ಲೂ ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹೂತು ಹಾಕ್ತೇವೆ: ಪಾಕಿಸ್ತಾನ ಯಡವಟ್ಟು ಸಚಿವ ಖ್ವಾಜಾ ಆಸಿಫ್ ಹೇಳಿಕೆ

Karnataka Weather: ಶಕ್ತಿ ಸೈಕ್ಲೋನ್ ಇಫೆಕ್ಟ್, ಈ ದಿನದವರೆಗೂ ರಾಜ್ಯದಲ್ಲಿ ಮಳೆ ಸೂಚನೆ

ನನಗೇ ಅಧಿಕಾರ ಇದ್ದಿದ್ದರೆ ಮೆಟ್ರೋಗೆ ಬಸವಣ್ಣನ ಹೆಸರಿಡುತ್ತಿದ್ದೆ: ಸಿದ್ದರಾಮಯ್ಯ

ಬೆಂಗಳೂರಿನವರಿಗೆ ಕುರಿ, ಕೋಳಿ ಎಂದೆಲ್ಲಾ ಪ್ರಶ್ನೆ ಕೇಳಬೇಡಿ: ಡಿಕೆ ಶಿವಕುಮಾರ್ ಖಡಕ್ ಸೂಚನೆ

ಜಾತಿ ಗಣತಿಯಲ್ಲಿ ಗೊಂದಲವೇ ಹೆಚ್ಚಾಗಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments