Webdunia - Bharat's app for daily news and videos

Install App

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

Krishnaveni K
ಶುಕ್ರವಾರ, 12 ಜುಲೈ 2024 (09:59 IST)
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ನಾಗೇಂದ್ರರನ್ನು ಇಂದು ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಹಗರಣದಲ್ಲಿ ನಾಗೇಂದ್ರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಈ ಪ್ರಕರಣದ ಬಗ್ಗೆ ಎಸ್ ಐಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣವಾಗಿರುವುದರಿಂದ ಇಡಿ ಕೂಡಾ ರಂಗಕ್ಕಿಳಿದಿತ್ತು.

ಬುಧವಾರ ನಾಗೇಂದ್ರ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಇಡಿ ದಾಖಲೆಗಳ ಪರಿಶೀಲನೆ ನಡೆಸಿತ್ತು. ಈ ವೇಳೆ ಅವ್ಯವಹಾರ ನಡೆದಿರುವುದಕ್ಕೆ ಸಾಕಷ್ಟು ಪುರಾವೆಗಳು ಸಿಕ್ಕಿತ್ತು. ತಮ್ಮ ಆಪ್ತರ ಮೂಲಕ ಮಾಜಿ ಸಚಿವರು ಹಣ ವರ್ಗಾವಣೆ ಮಾಡಿಕೊಂಡಿದ್ದರು ಎಂಬುದು ಸ್ಪಷ್ಟವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಡಾಲರ್ಸ್ ಕಾಲೊನಿಯಲ್ಲಿರುವ ನಾಗೇಂದ್ರ ನಿವಾಸಕ್ಕೆ ಬಂದ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಾಗೇಂದ್ರ ಪರವಾಗಿ ಅವರ ಆಪ್ತ ಹವಾಲ ಹಣ, ಚಿನ್ನದ ಬಿಸ್ಕತ್ ರೂಪದಲ್ಲಿ 50 ರಿಂದ 60 ಕೋಟಿ ರೂ. ಪಡೆದಿದ್ದಾರೆ ಎಂಬ ಆರೋಪಗಳಿವೆ. ಅಕ್ರಮ ಹೊರಬರುತ್ತಿದ್ದಂತೇ ವಿಪಕ್ಷಗಳು ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ಅದರಂತೆ ನಾಗೇಂದ್ರ ರಾಜಕೀಯ  ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದರು. ಇದೀಗ ಎಸ್ಐಟಿ, ಇಡಿ ಅಧಿಕಾರಿಗಳು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments