Webdunia - Bharat's app for daily news and videos

Install App

ವಾಲ್ಮೀಕಿ, ಮುಡಾ ಬಹುಕೋಟಿ ಹಗರಣದ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಮತ್ತೊಂದು ಅವ್ಯವಹಾರ: ಬಿವೈವಿ

Sampriya
ಭಾನುವಾರ, 5 ಜನವರಿ 2025 (16:44 IST)
ಬೆಂಗಳೂರು: ಜಮೀನು ಹಂಚಿಕೆ ಮಾಡದೆ ಅಂಬೇಡ್ಕೆರ್ ಅಭಿವೃದ್ಧಿ ನಿಗಮದಲ್ಲಿ ನಕಲಿ ಖರೀದಿ ಪತ್ರಗಳನ್ನು ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ₹16.85ಕೋಟಿ ನಷ್ಟವಾಗಿರುವುದು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಬರೆದುಕೊಂಡಿದ್ದಾರೆ.

ಶೋಷಿತರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ  ಲೂಟಿ, ಮೈಸೂರು ಮುಡಾ ಬಹುಕೋಟಿ ಹಗರಣಗಳು ತನಿಖೆಯ ಹಂತದಲ್ಲಿರುವಾಗಲೇ ಇದೀಗ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿಯೂ 16.85 ಕೋಟಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯೊಂದರಲ್ಲೇ ಈ ಪರಿಯ ಅವ್ಯವಹಾರ ನಡೆದಿದೆ ಎಂದರೆ ಇನ್ನು ರಾಜ್ಯದೆಲ್ಲೆಡೆ ಇರುವ ಜಿಲ್ಲೆಗಳಲ್ಲಿ ಯಾವ ಮಟ್ಟಕ್ಕೆ ಅಕ್ರಮಗಳು ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

ದಿನದಿಂದ ದಿನಕ್ಕೆ ನಾಡಿನ ಜನರ ಮೇಲೆ ಬೆಲೆ ಏರಿಕೆಯ ಬರೆ ಎಳೆಯುತ್ತಾ, ಅವ್ಯವಹಾರ, ಭ್ರಷ್ಟಾಚಾರಗಳು ಅಕ್ರಮಗಳ ಮೂಲಕ ದೇಶದ ಅತೀ ಕಡುಭ್ರಷ್ಟ ರಾಜ್ಯವೆಂಬ ಅಪಕೀರ್ತಿ ತರುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ನಿಮ್ನ ವರ್ಗಗಳ ಹಾಗೂ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ ಎಂಬುದು ಪದೇ ಪದೇ ಬಯಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments