ಮುಂಗಾರು ಅಧಿವೇಶನಕ್ಕೆ ಮುನ್ನವೇ ಸದನದ ಹೊರಗೆ ಬಿಜೆಪಿ ಪ್ರತಿಭಟನೆ

Krishnaveni K
ಸೋಮವಾರ, 15 ಜುಲೈ 2024 (11:15 IST)
ಬೆಂಗಳೂರು: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುನ್ನ ಇಂದು ಬೆಳ್ಳಂ ಬೆಳಿಗ್ಗೆಯೇ ಬಿಜೆಪಿ ವಾಲ್ಮೀಕಿ ಹಗರಣ ವಿಚಾರವಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಶುರು ಮಾಡಿದೆ.

ಸದನದಲ್ಲಿ ಇಂದು ವಾಲ್ಮೀಕಿ ಹಗರಣ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಇದಕ್ಕೆ ಮೊದಲೇ ಇಂದು ಬಿಜೆಪಿ ಫಲಕಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದೆ. ಇದಕ್ಕೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವ ವಹಿಸಿದ್ದರು.

ಸದನದಲ್ಲಿ ಈ ಬಾರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಮುಡಾ ಮತ್ತು ವಾಲ್ಮೀಕಿ ನಿಗಮ ಹಗರಣವೆಂಬ ಎರಡು ಅಸ್ತ್ರಗಳಿವೆ. ಇದಕ್ಕೆ ಪ್ರತಿಯಾಗಿ ತಿರುಗೇಟು ನೀಡಲು ಸರ್ಕಾರ ಕೂಡಾ ಸಿದ್ಧತೆ ನಡೆಸಿದೆ. ಹೀಗಾಗಿ ಸದನದಲ್ಲಿ ಕಾವೇರಿದ ವಾತಾವರಣ ನಿರೀಕ್ಷಿಸಲಾಗಿತ್ತು.

ಇಂದು ಬಿವೈ ವಿಜಯೇಂದ್ರ ಶಾಸಕರ ಭವನದ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಜರಿದ್ದರು. ಸದನದಲ್ಲೂ ಈ ಪ್ರತಿಭಟನೆ ಮುಂದುವರಿಯುವ ಸಾಧ್ಯತೆಗಳಿವೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments