Webdunia - Bharat's app for daily news and videos

Install App

ವಾಲ್ಮೀಕಿ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಹೆಚ್ಚಿದ ಒತ್ತಾಯ

Sampriya
ಗುರುವಾರ, 11 ಜುಲೈ 2024 (14:55 IST)
ಶಿರಸಿ: ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೆಸರು ತಳುಕು ಹಾಕುತ್ತಿದ್ದ ಹಾಗೇ ಸಿದ್ದರಾಮಯ್ಯ ಅವರು ಸಮಾಜವಾದಿ ಅಲ್ಲ ಮಜವಾದಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ವ್ಯಂಗ್ಯ ಮಾಡಿದ್ದಾರೆ.

ನಗರದ ದೀನದಯಾಳ ಸಭಾಂಗಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಗರಣ ನಡೆದಿದೆ ಎನ್ನಲಾಗಿದ್ದು, ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರಾಗಿದ್ದಾರೆ.  ಇಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆ ಸಿಎಂ ಗಮನಕ್ಕೆ ಬಾರದೆ ಹೇಗೆ ನಡೆಯಿತು. ಆದ್ದರಿಂದ ಈ ಹಗರಣದ ನೇರ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ವಹಿಸಬೇಕು ಎಂದರು.

ಇನ್ನೂ ಈ ಪ್ರಕರಣದಿಂದ ಪಾರಾಗಲು ಸಿಎಂ ಹಾಗೂ ಸಚಿವ ಭೈರತಿ ಸುರೇಶ್ ಅವರು ಮುಂದಾಗಿದ್ದಾರೆ. ಅಧಿಕಾರಿಗಳ ತಲೆದಂಡದ ಮೂಲಕ ತಾವು ಬಚಾವಾಗಲು ನೋಡುತ್ತಿದ್ದಾರೆ ಎಂದು ಹೇಳಿದರು.

ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಹಗರಣ, ಮುಡಾ ಹಗರಣದಲ್ಲಿ ನೇರ ಪಾತ್ರವಿರುವ ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು. ಇವೆರಡೂ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments