Webdunia - Bharat's app for daily news and videos

Install App

ನಾಳೆಯಿಂದ ತುಮಕೂರಿನಲ್ಲಿ ನಿಲುಗಡೆಯಾಗಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್, ಸಚಿವ ವಿ ಸೋಮಣ್ಣ ಚಾಲನೆ

Sampriya
ಗುರುವಾರ, 22 ಆಗಸ್ಟ್ 2024 (20:04 IST)
Photo Courtesy X
ತುಮಕೂರು:  ಈಗಾಗಲೇ ಬೆಂಗಳೂರು ಧಾರವಾಡ ನಡುವೆ ಸಂಚಾರ ನಡೆಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನಾಳೆಯಿಂದ ತುಮಕೂರಿನಲ್ಲಿ ನಿಲುಗಡೆಯಾಗಲಿದೆ. ಈ ಗುಡ್‌ನ್ಯೂಸ್‌ ಅನ್ನು ಕೇಂದ್ರ ರೈಲ್ವೆ ಸಹಾಯಕ ಖಾತೆ ಸಚಿವರಾದ ವಿ.ಸೋಮಣ್ಣ ಅವರು ನೀಡಿದ್ದು, ನಾಳೆ ಅವರೇ ತುಮಕೂರಿನಲ್ಲಿ ವಂದೇ ಭಾರತ್ ಸೇವೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ವಿ ಸೋಮಣ್ಣ ಅವರು,  ತುಮಕೂರಿನಲ್ಲಿ ವಂದೇ ಭಾರತ್ ರೈಲಿಗೆ ನಾಳೆ ಆಗಸ್ಟ್‌ 23 ರಂದು ಸಂಜೆ 5.30 ಗಂಟೆಗೆ ಚಾಲನೆ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ತುಮಕೂರು ಲೋಕಸಭಾ ಕ್ಷೇತ್ರದ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಆಗಮಿಸಿ, ಯಶಸ್ವಿಗೊಳಿಸಬೇಕೆಂದು ಎಂದು ಮನವಿ ಮಾಡಿದ್ದಾರೆ.

ವಂದೇ ಭಾರತ್‌ ರೈಲು ತುಮಕೂರಿನಲ್ಲಿ ನಾಳೆ ಸಂಜೆ 6.18ಕ್ಕೆ ರೈಲು ನಿಲುಗಡೆಯಾಗಲಿದೆ. ಆ ಬಳಿಕ ಆಗಸ್ಟ್‌ 24 ರಿಂದ ಧಾರವಾಡಕ್ಕೆ ತೆರಳುವಾಗ ಹಾಗೂ ಧಾರವಾಡದಿಂದ ಹಿಂದಿರುಗುವಾಗ ಬೆಳ್ಳಿಗ್ಗೆ ಹಾಗೂ ಸಂಜೆ ನಿಲುಗಡೆಯಾಗಲಿದೆ.

ಇನ್ನೂ ವಿ ಸೋಮಣ್ಣ ಅವರು ತುಮಕೂರಿಗೆ ಹಲವು ಯೋಜನೆಗಳನ್ನು ಕೈಗೊಂಡು ಈ ಬಾರಿಯ ಬಜೆಟ್‌ನಲ್ಲಿ ತುಮಕೂರು-ದಾವಣಗೆರೆ ನೇರ ರೈಲು ಮಾರ್ಗಕ್ಕೆ 150 ಕೋಟಿ ರೂ., ತುಮಕೂರು-ರಾಯದುರ್ಗಕ್ಕೆ (ಕಲ್ಯಾಣದುರ್ಗ ಮಾರ್ಗ) 250 ಕೋಟಿ ರೂ. ಅನುದಾನ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments