ವಂದೇ ಮಾತರಂ’ಗೆ ಗೌರವ ನೀಡಬೇಕು-ಸುಪ್ರೀಂ ಕೋರ್ಟ್‌

Webdunia
ಭಾನುವಾರ, 6 ನವೆಂಬರ್ 2022 (18:11 IST)
ದೇಶದ ನಾಗರಿಕರು ರಾಷ್ಟ್ರಗೀತೆ ಜನ ಗಣ ಮನ ಮತ್ತು ರಾಷ್ಟ್ರೀಯ ಗಾಯನ ವಂದೇ ಮಾತರಂಗೆ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸುಪ್ರೀಂ ಕೋರ್ಟ್‌ನ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಉತ್ತರಿಸಿದ ಗೃಹ ಸಚಿವಾಲಯ ಜನ ಗಣ ಮನ ಮತ್ತು ರಾಷ್ಟ್ರಗೀತೆ ವಂದೇ ಮಾತರಂ ಒಂದೇ ಸಾಲಿನಲ್ಲಿ ನಿಲ್ಲುತ್ತೇವೆ, ಹೀಗಾಗಿ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಲ್ಲಿಸಿದ್ದರು. ಈ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಕೇಂದ್ರ ಸರ್ಕಾರದ ವಕೀಲ ಮನೀಶ್ ಮೋಹನ್ ಮೂಲಕ ಪ್ರತಿಕ್ರಿಯಿಸಿದೆ. ಮುಂದುವರೆದು ವಂದೇ ಮಾತರಂ ಹಾಡುವ ಅಥವಾ ನುಡಿಸುವ ಬಗ್ಗೆ ಯಾವುದೇ ದಂಡದ ನಿಬಂಧನೆಗಳು ಅಥವಾ ಸೂಚನೆಗಳಿಲ್ಲ. ಈ ಹಾಡು ಭಾರತೀಯರ ಭಾವನೆಗಳು ಮತ್ತು ಮನಸ್ಸಿನಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ. ಹಾಡಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ನ ಎಲ್ಲಾ ನಿರ್ದೇಶನಗಳು ಅನುಸರಿಸಲಾಗುತ್ತಿದೆ. ಎರಡಕ್ಕೂ ತನ್ನದೇ ಆದ ಪಾವಿತ್ರ್ಯತೆ ಇದೆ ಮತ್ತು ಸಮಾನ ಗೌರವಕ್ಕೆ ಅರ್ಹವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ 2 ದಿನದಲ್ಲಿ ಕರಾವಳಿ ಹವಾಮಾನದಲ್ಲಿ ಭಾರೀ ಬದಲಾವಣೆ, ಮಳೆ ನಿರೀಕ್ಷಿಸಬಹುದಾ

ಮುಂದಿನ ಸುದ್ದಿ
Show comments