Webdunia - Bharat's app for daily news and videos

Install App

ವಂದೇ ಮಾತರಂ’ಗೆ ಗೌರವ ನೀಡಬೇಕು-ಸುಪ್ರೀಂ ಕೋರ್ಟ್‌

Webdunia
ಭಾನುವಾರ, 6 ನವೆಂಬರ್ 2022 (18:11 IST)
ದೇಶದ ನಾಗರಿಕರು ರಾಷ್ಟ್ರಗೀತೆ ಜನ ಗಣ ಮನ ಮತ್ತು ರಾಷ್ಟ್ರೀಯ ಗಾಯನ ವಂದೇ ಮಾತರಂಗೆ ಸಮಾನ ಗೌರವ ನೀಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸುಪ್ರೀಂ ಕೋರ್ಟ್‌ನ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಉತ್ತರಿಸಿದ ಗೃಹ ಸಚಿವಾಲಯ ಜನ ಗಣ ಮನ ಮತ್ತು ರಾಷ್ಟ್ರಗೀತೆ ವಂದೇ ಮಾತರಂ ಒಂದೇ ಸಾಲಿನಲ್ಲಿ ನಿಲ್ಲುತ್ತೇವೆ, ಹೀಗಾಗಿ ಎರಡಕ್ಕೂ ಸಮಾನ ಗೌರವ ನೀಡಬೇಕು ಎಂದು ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಲ್ಲಿಸಿದ್ದರು. ಈ ಹಿನ್ನೆಲೆ ಕೇಂದ್ರ ಗೃಹ ಸಚಿವಾಲಯ ಕೇಂದ್ರ ಸರ್ಕಾರದ ವಕೀಲ ಮನೀಶ್ ಮೋಹನ್ ಮೂಲಕ ಪ್ರತಿಕ್ರಿಯಿಸಿದೆ. ಮುಂದುವರೆದು ವಂದೇ ಮಾತರಂ ಹಾಡುವ ಅಥವಾ ನುಡಿಸುವ ಬಗ್ಗೆ ಯಾವುದೇ ದಂಡದ ನಿಬಂಧನೆಗಳು ಅಥವಾ ಸೂಚನೆಗಳಿಲ್ಲ. ಈ ಹಾಡು ಭಾರತೀಯರ ಭಾವನೆಗಳು ಮತ್ತು ಮನಸ್ಸಿನಲ್ಲಿ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದೆ. ಹಾಡಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ನ ಎಲ್ಲಾ ನಿರ್ದೇಶನಗಳು ಅನುಸರಿಸಲಾಗುತ್ತಿದೆ. ಎರಡಕ್ಕೂ ತನ್ನದೇ ಆದ ಪಾವಿತ್ರ್ಯತೆ ಇದೆ ಮತ್ತು ಸಮಾನ ಗೌರವಕ್ಕೆ ಅರ್ಹವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments