Webdunia - Bharat's app for daily news and videos

Install App

ಜಿಲ್ಲೆಯ ಹಲವೆಡೆ ವರುಣನ ಆರ್ಭಟ

Webdunia
ಭಾನುವಾರ, 20 ಮಾರ್ಚ್ 2022 (14:18 IST)
ಭಾರಿ ಬಿರುಗಾಳಿಗೆ ತೆಂಗಿನ ಮರ (Coconut Tree) ಬಿದ್ದು, ಬಾಲಕಿ ಸಾವನ್ನಪ್ಪಿರಿವಂತಹ ಘಟನೆ ನಡೆದಿದೆ. ಶ್ರೀರಂಗಪಟ್ಟಣ-ಬನ್ನೂರು ರಸ್ತೆಯ ದೊಡ್ಡಪಾಳ್ಯದೊಡ್ಡಿ ಬಳಿ ಘಟನೆ ನಡೆದಿದೆ. ಕೆಆರ್​ಎಸ್​ ಗ್ರಾಮದ ನಾಗರಾಜು, ಪ್ರೇಮ ದಂಪತಿಯ ಪುತ್ರಿ ಪ್ರಿಯಾಂಕ (12) ಮೃತಪಟ್ಟಿರುವ ಬಾಲಕಿ. ಬಿರುಗಾಳಿಯಿಂದ ಕಾರು ಹಾಗೂ ಬೈಕ್ ಮೇಲೆ ತೆಂಗಿನ ಮರ ಬಿದ್ದು ದುರ್ಘಟನೆ ಸಂಭವಿಸಿದೆ. ತಂದೆ, ತಾಯಿಯ ಜತೆ ಬೈಕ್​ನಲ್ಲಿ ಪ್ರಿಯಾಂಕ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ದೊಡ್ಡಪಾಳ್ಯದೊಡ್ಡಿ ಬಳಿ ಬರುತ್ತಿದ್ದ ವೇಳೆ ಬಿರುಗಾಳಿ ಹೆಚ್ಚಾಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬೃಹತ್ ತೆಂಗಿನ ಮರ ಬೈಕ್ ಮೇಲೆ ಬಿದ್ದಿದೆ. ಘಟನೆಯಲ್ಲಿ ಬೈಕ್ ಮುಂದೆ ಕುಳಿತಿದ್ದ ನಾಗರಾಜು ಹಾಗೂ ಪುತ್ರಿ ಪ್ರಿಯಾಂಕಗೆ ಗಭೀರ ಗಾಯವಾಗಿದ್ದು, ರಕ್ತದ ಮಡುವಿನಲ್ಲಿ ನರಳುತ್ತಿದ್ದವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಪ್ರಿಯಾಂಕ ಸಾವನ್ನಪ್ಪಿದ್ದಾಳೆ. ಸದ್ಯ ನಾಗರಾಜ್​ಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಪ್ರೆಮಾ, ಪುತ್ರ ಚೇತನ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಇದೇ ವೇಳೆ ಕಾರಿನ ಮೇಲೂ ಮರ ಬಿದ್ದಿದ್ದು ಪಿಹಳ್ಳಿ ಗ್ರಾಮದ ನಾಗಮ್ಮ ಗಾಯಗೊಂಡಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಿಲ್ಲೆಯ ಹಲವೆಡೆ ವರುಣನ ಆರ್ಭಟಕ್ಕೆ  ಸಿಡಿಲು ಬಡಿದು ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಹೆಚ್. ಡಿ. ಕೋಟೆ ತಾಲೂಕಿನ ಹುಲ್ಲೇಮಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮೈಸೂರು ಮಾನಂದವಾಡಿ ರಸ್ತೆಗೆ ಅಡ್ಡವಾಗಿ ಮರ ಬಿದ್ದಿದೆ. ಆಂಜನೇಯ ದೇವಸ್ಥಾನದ ಬಳಿ ಗಾಳಿಯ ಆರ್ಭಟದಿಂದ ಮರ ನೆಲಕ್ಕುರುಳಿದೆ. ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಬದಲಿ ಮಾರ್ಗವಾಗಿ ವಾಹನಗಳು ಸಂಚರಿಸಿವೆ.
 
 ಜಿಲ್ಲೆಯಲ್ಲಿ ಸಿಡಿಲು ಅಬ್ಬರಕ್ಕೆ ವೃದ್ದ ಸಾವನ್ನಪ್ಪಿದ್ದಾರೆ. ಸಾಲಿಗ್ರಾಮ ತಾಲೂಕಿನ ಹನಸೋಗೆ ಗ್ರಾಮದಲ್ಲಿ ಘಟನೆ ನಡೆದಿದೆ. ಸಿದ್ದಲಿಂಗನಾಯಕ (72 ) ಮೃತ ದುರ್ದೈವಿ. ಜಮೀನಿನ ಬಳಿ ಕೆಲಸ ಮಾಡುತ್ತಿದ್ದಾಗ ಮಳೆ ಬಂದಿದೆ. ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದ ಸಿದ್ದಲಿಂಗನಾಯಕ, ಈ ವೇಳೆ ಸಿಡಿಲು ಬಡಿದು ಹಸುನಿಗಿದ್ದಾರೆ. ರೈತ ಸಿದ್ದಲಿಂಗಸ್ವಾಮಿ ಕುಟುಂಬಕ್ಕೆ‌ಪರಿಹಾರ ನೀಡುವಂತೆ ಗ್ರಾಮದ‌ ಮುಖಂಡರಿಂದ ಒತ್ತಾಯ ಮಾಡಲಾಗುತ್ತಿದೆ. ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
 ನಗರದಲ್ಲಿ ಮಳೆಯ ಅಬ್ಬರಿದಿಂದ್ದಾಗಿ ಮೋರಿಯಲ್ಲಿ ಸಿಲುಕಿದ್ದ ನಾಯಿ ಮರಿಗಳ‌ ರಕ್ಷಣೆ ಮಾಡಲಾಗಿದೆ. ಮೈಸೂರಿನ ಕುವೆಂಪುನಗರದಲ್ಲಿ ಘಟನೆ ಕಂಡುಬಂದಿದೆ. ಮೋರಿಯ ಒಳಗೆ ಸಿಲುಕಿದ್ದ 9 ನಾಯಿ ಮರಿಗಳನ್ನು ಉರುಗ ಸಂರಕ್ಷಕ ಸೂರ್ಯ ಕೀರ್ತಿ ರಕ್ಷಣೆ ಮಾಡಿದ್ದಾರೆ. ಸ್ಥಳೀಯರ ಮಾಹಿತಿ ಆಧಾರಿಸಿ ಕಾರ್ಯಾಚರಣೆ ನಡೆಸಿದ್ದು, ಹಾರೆಯಿಂದ ಮೋರಿ ಚಪ್ಪಡಿ ಕಲ್ಲು ಸರಿಸಿ ರಕ್ಷಣೆ ಮಾಡಲಾಗಿದೆ. ಎಲ್ಲಾ ಮರಿಗಳ‌ನ್ನು ರಕ್ಷಿಸಿ ಪ್ರಾಥಮಿಕ‌ ಚಿಕಿತ್ಸೆ ಕೂಡ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments