Webdunia - Bharat's app for daily news and videos

Install App

ವಾಸ್ತು ಗುರೂಜಿ ಕೊಲೆಗೆ ರೋಚಕ ಟ್ವಿಸ್ಟ್

Webdunia
ಸೋಮವಾರ, 10 ಅಕ್ಟೋಬರ್ 2022 (14:30 IST)
ಚಂದ್ರಶೇಖರ್ ಗುರೂಜಿ ಹತ್ಯೆಗೆ ಪ್ರಮುಖ ಕಾರಣ ಬೇನಾಮಿ ಆಸ್ತಿ ಮಾರಟವಾಗಿದ್ದು, ಗುರೂಜಿಗೆ ತಿಳಿಯದಂತೆ ಆರೋಪಿಗಳು ಬೇನಾಮಿ ಜಮೀನು ಮಾರಾಟ ಮಾಡಿರುವುದರಿಂದ ಹುಟ್ಟಿಕೊಂಡ ದ್ವೇಷ ಗುರೂಜಿ ಹತ್ಯೆಯಲ್ಲಿ ಕೊನೆಯಾಗಿದೆ.
ಬೇನಾಮಿ ಆಸ್ತಿ ಮಾರಾಟ ಮಾಡಿಸಲು ಮುಂದಾದವರು ಓರ್ವ ಕಾಂಗ್ರೆಸ್ ಮುಖಂಡ ಅಂತ ಈಗ ಬೆಳಕಿಗೆ ಬಂದಿದೆ. ಇಷ್ಟೇ ಅಲ್ಲದೇ ಇದು ಕೇವಲ ಜಮೀನು ಮಾರಾಟ ಅಲ್ಲ, ಗುರೂಜಿ ಕೊಲೆ ಸುಪಾರಿಗೆ ತಳುಕು ಹಾಕಿಕೊಂಡಿದೆ. ಕಾಂಗ್ರೆಸ್ ಮುಖಂಡ ದೀಪಕ್ ಚಿಂಚೋರೆ ಇದರ ಪ್ರಮುಖ ರೂವಾರಿ ಎಂಬುದು ತಿಳಿದುಬಂದಿದೆ.
 
ದೀಪಕ್ ಚಿಂಚೋರೆ ತನ್ನ ಆಪ್ತ ತಾನಾಜಿ ಶಿರ್ಕೆಗೆ, ಹಂತಕರಿಗೆ ಒಂದಿಷ್ಟು ಹಣ ಅಡ್ವಾನ್ಸ್ ಕೊಟ್ಟು ಗುರೂಜಿ ಬೇನಾಮಿ ಆಸ್ತಿ ಕೊಡಿಸಿದ್ದರು. ರಿಜಿಸ್ಟ್ರೇಷನ್ ಬಳಿಕ ಪೂರ್ತಿ ಹಣ ನೀಡುವ ಮಾತುಕತೆಯಾಗಿತ್ತು. ಇಷ್ಟೊತ್ತಿಗಾಗಲೇ ಈ ವಿಚಾರ ತಿಳಿದು ಗುರೂಜಿ ಮತ್ತು ಕುಟುಂಬಸ್ಥರು ಈ ಬಗ್ಗೆ ಕೋರ್ಟ್‌ನಲ್ಲಿ ಕೇಸ್ ಹಾಕಿದ್ದರು. ಇದರಿಂದಾಗಿ ಆಸ್ತಿ ಮಾರಾಟದ ಬಳಿಕ ಬರಬೇಕಿದ್ದ ಪೂರ್ತಿ ಹಣ ಹಂತಕರ ಕೈಗೆ ತಲುಪಿರಲಿಲ್ಲ. ಅಲ್ಲದೆ ಆಸ್ತಿ ಖರೀದಿಸಿದ್ದ ದೀಪಕ್ ಚಿಂಚೋರೆ, ಕೋರ್ಟ್ ಕೇಸ್ ಪರಿಹರಿಸಿ ಕೊಡಿ, ಇಲ್ಲದಿದ್ದರೆ ಹಣ ಮರಳಿ ಕೊಡುವಂತೆ ಒತ್ತಡ ಸಹ ಹಾಕಿದ್ದರು. ಇದರಿಂದಾಗಿ ಆರೋಪಿಗಳು ದೀಪಕ್ ಚಿಂಚೋರೆ ಮೇಲೂ ಸಹ ಅಸಮಾಧಾನ ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments