Select Your Language

Notifications

webdunia
webdunia
webdunia
webdunia

ಕೇಂದ್ರ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ವಾಗ್ದಾಳಿ

webdunia
bangalore , ಸೋಮವಾರ, 18 ಜುಲೈ 2022 (17:34 IST)
ವಿನೂತನ ಚಳುವಳಿಯ ನಾಯಕ ವಾಟಾಳ್ ನಾಗಾರಜ್ ಇಂದು ಬೀದಿಗಿಳಿದು ಸರ್ಕಾರದ ವಿರುದ್ಧ ಧರಣಿ ನಡೆಸಿದ್ದಾರೆ.ಮಳೆ ಹಾನಿ ಪರಿಹಾರಕ್ಕಾಗಿ, ಜಿಎಸ್ಟಿ ವಿರೋಧಿಸಿ ಮೈಸೂರು ಬ್ಯಾಂಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪರಿಹಾರ ನೀಡಬೇಕಾದ ಮಂತ್ರಿಗಳು ಫೈ ಸ್ಟಾರ್ ಹೋಟೆಲ್ ಗಳಲ್ಲಿದ್ದಾರೆ.ಅಲ್ಲೊಬ್ಬ ಇಲ್ಲೊಬ್ಬ ಶಾಸಕರು ಕಾಣಿಸಿಕೊಳ್ತಿದ್ದಾರೆ.ಮುಂದಿನ ದಿನಗಳಲ್ಲಿ ಯೂರಿನ್ ಪಾಸ್ ಮಾಡಲು ಸರ್ಕಾರ ಜಿಎಸ್ಟಿ ಹಾಕ್ತಾರೆ.ಜ‌ನ ಸಾಮಾನ್ಯರು ಜೀವನ ನಡೆಸುವುದು ಹೇಗೆ ಹೀಗೆ ಆದ್ರೆ ,ಮಳೆಯಿಂದ ಆಗಿರೋ ಅನಾಹುತಗಳಿಗೆ ಪರಿಹಾರ ಘೋಷಣೆ ಮಾಡಬೇಕು.ಸತ್ತವರಿಗೆ 25 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ರು. ಜೊತೆಗೆ ಆಹಾರ ಪದಾರ್ಥಗಳ ಮೇಲೆ ಹಾಕಿರೋ ಜಿಎಸ್ಟಿ ವಾಪಸ್ ಪಡೆಯಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ  ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ  ವಾಟಾಳ್ ನಾಗರಾಜ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಇಂದ ಪುಡ್ ಪ್ರಿಯರಿಗೆ ಗುಡ್ ನ್ಯೂಸ್