Webdunia - Bharat's app for daily news and videos

Install App

ಬಿಜೆಪಿಗೆ ಡೆಡ್ ಲೈನ್ ನೀಡಿದ ವಾಟಾಳ್ ನಾಗರಾಜ್

Webdunia
ಗುರುವಾರ, 1 ಫೆಬ್ರವರಿ 2018 (06:38 IST)
ಬೆಂಗಳೂರು : ಕನ್ನಡ ಪರ ಸಂಘಟನೆಯ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಹದಾಯಿ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಬಗೆ ಹರಿಸುವ ಭರವಸೆಯನ್ನು ನೀಡದೇ ಇದ್ದರೆ ಫೆ.4 ರಂದು ಬೆಂಗಳೂರು ಬಂದ್ ನಡೆಸಲಾಗುವುದು ಎಂದು ಹೇಳಿದ್ದಾರೆ.

 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ ನಾವು ಜನವರಿ 25ರಂದು ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ನಡೆಸಿದ್ದೇವೆ. ಇದಕ್ಕೆ ಯಾವ ಸರ್ಕಾರ ಕೂಡ ಬೆಂಬಲ ನೀಡಿರಲಿಲ್ಲ. ಆದರೆ ಬಿಜೆಪಿ ನಾಯಕರು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರ ನಾಲಿಗೆ ಸರಿ ಇಲ್ಲ. ಹಾದಿಬೀದಿಯಲ್ಲಿ ಮಾತನಾಡುವುದನ್ನು ಬಿಟ್ಟು ಪ್ರಧಾನ ಮಂತ್ರಿ ಬಳಿ ಮಾತನಾಡಿ ಸಮಸ್ಯೆ ಬಗೆಹರಿಸಿ’ ಎಂದು ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ.

 
‘ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಫೆ. 4ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಬರುತ್ತಿದ್ದಾರೆ. ಹೀಗಾಗಿ 3ನೇ ತಾರೀಖಿನ ಒಳಗಡೆ ಮಹದಾಯಿ ನೀರಿನ ಸಮಸ್ಯೆಯನ್ನು ನಾನು ಬಗೆಹರಿಸುತ್ತೇನೆ ಎಂದು ಭರವಸೆ ಕೊಡಿಸಿ. ಇಲ್ಲದೇ ಇದ್ದರೆ 4ರಂದು ಬೆಂಗಳೂರು ಬಂದ್ ಮಾಡಬೇಕಾಗುತ್ತದೆ. ನಮಗೆ ಸ್ಪಷ್ಟವಾದ ಭರವಸೆ ಕೊಡಿಸಬೇಕು. ಶನಿವಾರ ಮಧ್ಯಾಹ್ನದ ತನಕ ಕಾಯುತ್ತೇವೆ. ಮಧ್ಯಾಹ್ನದ ಒಳಗಡೆ ಭರವಸೆ ಸಿಗದೇ ಹೋದರೆ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ವಾಟಾಳ್ ನಾಗರಾಜ್ ಅವರು ಬಿಜೆಪಿಗೆ ಡೆಡ್‍ಲೈನ್ ನೀಡಿದ್ದಾರೆ.

 
ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿ ಪ್ರಧಾನಮಂತ್ರಿಯವರಿಗೆ ಪತ್ರ ಬರೆಯುವಂತೆ ಮನವಿ ಮಾಡುತ್ತೇವೆ ಎಂದು ಕೂಡ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments