ದೋಣಿಯ ಮೇಲೆ ವೀಣಾ ವಾದನ

Webdunia
ಶನಿವಾರ, 30 ಏಪ್ರಿಲ್ 2022 (20:17 IST)
ಶಾಸ್ತ್ರೀಯ ಸಂಗೀತಕ್ಕೆ ಅದರದೆ ಆದ ವೇದಿಕೆ, ನಿಯಮ ಇದೆ, ಹಾಗಾಗಿ ಎಲ್ಲೆಂದರಲ್ಲಿ ಹಾಡುವಂತಿಲ್ಲ. ಆದರೆ ನಿಯಮಕ್ಕೆ ಅನುಗುಣವಾಗಿ ತ್ರಿವೇಣಿ ಸಂಗಮದೊಂದಿಗೆ ಸಮುದ್ರ ರಾಜನಲ್ಲಿ ಲೀನವಾಗುವ ನದಿಯಲ್ಲಿ ದೋಣಿಯಲ್ಲಿ ವೀಣಾ ವಾದನ ಮಾಡಿ ಸರಸ್ವತೀ ಆರಾಧನೆ ಮಾಡಿದ್ದಾರೆ ರಾಷ್ಟ್ರಮಟ್ಟದ ಖ್ಯಾತಿಯ ವೀಣಾ ವಾದಕಿ ಉಡುಪಿಯ ವಿದುಷಿ ಪವನ ಆಚಾರ್ಯ. ಅವರು ಕೋಡಿಬೆಂಗ್ರೆಯ ಶ್ರೀ ದುರ್ಗಾದೇವಿ ಮಹಾಕಾಳಿ ಅಮ್ಮನವರ ದೇವಸ್ಥಾನದ 15 ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವದಂದು ಈ ವಿಶೇಷ ವೀಣಾ ವಾದನ ಮಾಡಿದ್ದಾರೆ. ಸೀತಾ, ಸ್ವರ್ಣ ಮತ್ತು ಮಡಿಸಾಲು ನದಿಯ ಸಂಗಮ ಸ್ಥಳವಾದ ಕೋಡಿ ನದಿ ತೀರದಲ್ಲಿ ದೋಣಿಯಲ್ಲಿ ವೀಣಾ ವಾದನ ಮಾಡಲು ದೇವಸ್ಥಾನದ  ಸಂಘಟಕರು ವೇದಿಕೆಯೊಂದನ್ನು ಮಾಡಿದ್ದರು. ವಿದುಷಿ ಅವರಿಗೆ ತಬಲಾದಲ್ಲಿ ವಿದ್ವಾನ್ ಮಾಧವ ಆಚಾರ್ಯ, ಸಹ ವೀಣಾ ವಾದಕರಾಗಿ ವೈಭವ ಪೈ, ತಾಳದಲ್ಲಿ ಕುಮಾರಿ  ಜಾನ್ಹವಿ  ಸಹಕರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ