Webdunia - Bharat's app for daily news and videos

Install App

ಜಾರಕಿಹೊಳಿ ದೊಡ್ಡ ನಾಯಕರಲ್ಲ, ಮಾಧ್ಯಮಗಳೇ ಆ ರೀತಿ ಬಿಂಬಿಸುತ್ತಿವೆ: ವೀರಪ್ಪ ಮೊಯಿಲಿ

Webdunia
ಶನಿವಾರ, 15 ಸೆಪ್ಟಂಬರ್ 2018 (11:02 IST)
ಚಿಕ್ಕಬಳ್ಳಾಪುರ: ಬೆಳಗಾವಿ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತದ ಬಗ್ಗೆ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ ಎಂದಿದ್ದಾರೆ.

ಜಾರಕಿಹೊಳಿ ಸಹೋದರರು ದೊಡ್ಡ ನಾಯಕರೇನೂ ಅಲ್ಲ. ಮಾಧ್ಯಮಗಳು ಆ ರೀತಿ ಬಿಂಬಿಸುತ್ತಿವೆ ಅಷ್ಟೆ. ಅವರಿಂದ ಕಾಂಗ್ರೆಸ್ ಪಕ್ಷ ಮತ್ತು ಮೈತ್ರಿ ಸರ್ಕಾರವನ್ನು ಉರುಳಿಸಲು ಆಗಲ್ಲ ಎಂದಿದ್ದಾರೆ.

ಇನ್ನು ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿ ಬಗ್ಗೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಆರೋಪ ಮಾಡಿದ್ದಾರೆಂದರೆ ಅದರಲ್ಲಿ ಸತ್ಯಾಂಶವಿರುತ್ತದೆ. ಒಂದು ವೇಳೆ ಬಿಜೆಪಿ ಈ ಕೆಲಸಕ್ಕೆ ಕೈ ಹಾಕಿದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಆ ಪಕ್ಷದ ಸಂಸದರ ಸ್ಥಾನ ಎರಡರಿಂದ ಮೂರಕ್ಕೆ ಇಳಿಯಬಹುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments