Webdunia - Bharat's app for daily news and videos

Install App

ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ರಚನೆ

Webdunia
ಮಂಗಳವಾರ, 17 ಅಕ್ಟೋಬರ್ 2017 (08:54 IST)
ಬೆಂಗಳೂರು: 2018 ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. 15 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಿ ಮತ್ತು 94 ಜನರನ್ನೊಳಗೊಂಡ ಕಾರ್ಯಕಾರಿ ಸಮಿತಿ ರಚಿಸಿ ಎಐಸಿಸಿ ಆದೇಶ ಹೊರಡಿಸಿದೆ. ಇದರ ನಡುವೆ ನೂತನ ಚುನಾವಣಾ ಪ್ರಣಾಳಿಕೆ ಸಮಿತಿ ರಚಿಸಿದೆ. ಇದರ ನೇತೃತ್ವವನ್ನು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿಗೆ ವಹಿಸಲಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್‌.ಆರ್‌.ಪಾಟೀಲ್‌, ದಿನೇಶ್‌ ಗುಂಡೂರಾವ್‌, ಸಚಿವರಾದ ರಾಮಲಿಂಗಾರೆಡ್ಡಿ, ಕಾಗೋಡು ತಿಮ್ಮಪ್ಪ, ಎಚ್.ಕೆ. ಪಾಟೀಲ್‌, ಎಂ.ಬಿ. ಪಾಟೀಲ್‌, ಡಾ. ಎಚ್‌.ಸಿ ಮಹದೇವಪ್ಪ, ಕೆ.ಜೆ. ಜಾರ್ಜ್‌, ಯು.ಟಿ. ಖಾದರ್‌, ಎಚ್‌.ಎಂ. ರೇವಣ್ಣ, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಉಮಾಶ್ರೀ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಕೇಂದ್ರ ಮಾಜಿ ಸಚಿವೆ ಮಾರ್ಗರೇಟ್‌ ಆಳ್ವಾ, ಎಐಸಿಸಿ ಕಾರ್ಯದರ್ಶಿ ಸತೀಶ್‌ ಜಾರಕಿಹೊಳಿ, ಶಾಸಕರಾದ ಅಪ್ಪಾಜಿ ನಾಡಗೌಡ, ವಿನಯ್ ಕುಮಾರ್‌ ಸೊರಕೆ, ಕೆ.ಎನ್‌. ರಾಜಣ್ಣ, ಕೆ.ಸಿ.ಕೊಂಡಯ್ಯ, ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್, ಮಾಜಿ ಸಚಿವ ಪ್ರೊ. ಬಿ.ಕೆ.ಚಂದ್ರಶೇಖರ್‌, ಮಾಜಿ ಶಾಸಕ ನಂಜಯ್ಯನ ಮಠ, ಅಲ್ಲಮಪ್ರಭು ಪಾಟೀಲ್‌, ಎಲ್‌.ಹನುಮಂತಯ್ಯ, ಜೆ.ಅಲೆಕ್ಸಾಂಡರ್‌, ವೆಂಕಟರಾವ್‌ ಘೋರ್ಪಡೆ, ಮಾಜಿ ಸಂಸದ ಐ.ಜಿ.ಸನದಿ, ಪ್ರೊ. ರಾಧಾಕೃಷ್ಣ, ಡಾ.ಲೋಹಿತ್‌ ನಾಯ್ಕರ್‌, ಪುಷ್ಪಾ ಅಮರನಾಥ, ಜಮೀರ್‌ ಪಾಷಾ ಹಾಗೂ ಡಾ. ಸಯ್ಯದ್ ನಾಸಿರ್‌ ಹುಸೇನ್‌ ರನ್ನು ಪ್ರಣಾಳಿಕೆ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments