ಟ್ವೀಟ್ ನಿಂದ ತಾವೇ ಪಕ್ಷದ ಬಂಡವಾಳ ಬಯಲು ಮಾಡಿದ ಹಿರಿಯ ನಾಯಕ ವೀರಪ್ಪ ಮೊಯಿಲಿ

Webdunia
ಶುಕ್ರವಾರ, 16 ಮಾರ್ಚ್ 2018 (09:04 IST)
ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಮಾಡಿರುವ ಟ್ವೀಟ್ ಒಂದು ತಾನಾಗಿಯೇ ವಿಪಕ್ಷಗಳಿಗೆ ಟೀಕೆಗೆ ರಸದೌತಣ ನೀಡಿದೆ.

ಅಷ್ಟಕ್ಕೂ ಇದು ಕಾಂಗ್ರೆಸ್ ಒಂದೇ ಪಕ್ಷದ ಸಮಸ್ಯೆಯಲ್ಲ. ಎಲ್ಲಾ ಪಕ್ಷಗಳಲ್ಲೂ ನಡೆಯುವಂತಹದ್ದೇ. ಆದರೆ ವೀರಪ್ಪ ಮೊಯಿಲಿ ಟ್ವೀಟ್ ಮಾಡಿ ತಾವೇ ವಿಪಕ್ಷಗಳಿಗೆ ಆಹಾರವಾಗಿದ್ದಾರೆ.

ರಾಜಕಾರಣದಲ್ಲಿ ನಡೆಯುತ್ತಿರುವ ಹಣದ ಪ್ರಾಬಲ್ಯದ ಬಗ್ಗೆ ಕಾಂಗ್ರೆಸ್ ಗಮನಹರಿಸಬೇಕಿದೆ. ಕಾಂಗ್ರೆಸ್ ಗೆ ರಸ್ತೆ ಗುತ್ತಿಗೆದಾರರು ಬೇಕಾಗಿಲ್ಲ. ಲೋಕೋಪಯೋಗಿ ಸಚಿವರು ಇಂತಹವರೊಂದಿಗೆ ನಂಟು ಇಟ್ಟುಕೊಳ್ಳಬಾರದು ಎಂದು ರಾಹುಲ್ ಗಾಂಧಿ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ಆದರೆ ಇದು ನೈಸ್ ಹಗರಣದ ಕೇಂದ್ರ ಬಿಂದು ಅಶೋಕ್ ಖೇಣಿಯವರ ಸೇರ್ಪಡೆಗೆ ಅಸಮಾಧಾನ ವ್ಯಕ್ತಪಡಿಸಿ ಮೊಯಿಲಿ ಮಾಡಿರುವ ಟ್ವೀಟ್ ಎನ್ನಲಾಗುತ್ತಿದೆ. ಆದರೂ ವಿಪಕ್ಷ ಬಿಜೆಪಿ ಇದು ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹಣ ವಸೂಲಿ ರಾಜಕಾರಣ ನಡೆಯುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಟೀಕಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments