Webdunia - Bharat's app for daily news and videos

Install App

ರಾಜ್ಯ ಸರಕಾರ ಶೀಘ್ರ ಪತನವಾಗುತ್ತೆ ಎಂದ ಹುಚ್ಚ ವೆಂಕಟ್

Webdunia
ಭಾನುವಾರ, 16 ಸೆಪ್ಟಂಬರ್ 2018 (14:56 IST)
ರಾಜ್ಯ ಸರ್ಕಾರ ಶೀಘ್ರ ಪತನವಾಗುತ್ತದೆ.  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಹೇಳಿದ್ದಾರೆ.

ರಾಜ್ಯ ಸಮ್ಮಿಶ್ರ ಸರ್ಕಾರ ಶೀಘ್ರ ಪತನವಾಗುತ್ತದೆ ಎಂದು ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಮಾರುತಿ‌ನಗರದಲ್ಲಿ, ಗಣೇಶ ಚತುರ್ಥಿ ಕಾರ್ಯಕ್ರಮಕ್ಕೆ ಹುಚ್ಚ ವೆಂಕಟ್ ಆಗಮಿಸಿದ್ದರು. ಈ ವೇಳೆ ಮಾತನಾಡಿ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದು ರಾಜ್ಯ ಸರ್ಕಾರಕ್ಕೆ ತೊಂದರೆ ಎಂದು ಭವಿಷ್ಯ ನುಡಿದಿದ್ದಾರೆ. ನಾನು ಸಹ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನನ್ನ ತವರೂರು ಮಂಡ್ಯ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಚುನಾವಣೆಯ ಮುನ್ಸೂಚನೆ ನೀಡಿದ್ದಾರೆ.

ಇನ್ನೂ ಮಂಡ್ಯ ಜೆಡಿಎಸ್ ಭದ್ರ ಕೋಟೆ ಎನ್ನುವ ವಿಚಾರವಾಗಿ ಮಾತನಾಡಿ, ನನಗೆ ಜೆಡಿಎಸ್ ಭದ್ರ ಕೋಟೆ ಅನ್ನೋದು ಗೊತ್ತಿಲ್ಲ. ನನಗೆ ಮಂಡ್ಯ ಭದ್ರ ಕೋಟೆ. ಮಂಡ್ಯ ಜನರು ನನ್ನ ಕೈ ಹಿಡಿತಾರೆ. ಒಂದು ವೇಳೆ ಕೈ ಹಿಡಿಯಲಿಲ್ಲಾ ಅಂದರೆ ಒಂದು ಬಲವಾದ ಕಾರಣ ಇರುತ್ತೆ. ಕಾರಣ ಇಲ್ಲದೆ ಮಂಡ್ಯ ಜನ ಕೈ ಬಿಡಲ್ಲ ಎಂದು ರಾಜಕೀಯಕ್ಕೆ ಬರುವ ಮುನ್ಸೂಚನೆ ನೀಡಿದ್ದಾರೆ.

ಇನ್ನೂ ತಮ್ಮ ಡೈಲಾಗ್ ಡಿಲಿವೆರಿ ವೇಳೆ ಕಾರ್ಯಕ್ರಮದಲ್ಲಿ ಕುಡುಕನೊಬ್ಬನಿಗೆ ಕ್ಲಾಸ್ ತೆಗೆದುಕೊಂಡು, ನಾನು ನಿನಗಿಂತ ಜಾಸ್ತೀನಿ ಕುಡಿತಿನಿ ಕಣೋ, ಕುಡಿದ್ದಿನಿ ಅಂತಾ ಜಾಸ್ತಿ ಮಾತನಾಡಬಾರದು. ಸುಮ್ನ್ ನಿಂತ್ಕೋಬೇಕು ಎಂದರು. ಕಾರ್ಯಕ್ರಮದ ಕೊನೆಯಲ್ಲಿ ಹುಚ್ಚವೆಂಕಟ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯುವಕರ ದಂಡೇ ಮುಗಿಬಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments