Select Your Language

Notifications

webdunia
webdunia
webdunia
webdunia

ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅಯ್ಕೆ ವಿರೋಧಿಸಿ ಕರವೇ ಪ್ರತಿಭಟನೆ

ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅಯ್ಕೆ ವಿರೋಧಿಸಿ ಕರವೇ ಪ್ರತಿಭಟನೆ
ಬೆಂಗಳೂರು , ಮಂಗಳವಾರ, 24 ಮೇ 2016 (12:00 IST)
ರಾಜ್ಯಸಭೆಗೆ ವೆಂಕಯ್ಯ ನಾಯ್ಡು ಅವರ ಅಯ್ಕೆಯನ್ನು ವಿರೋಧಿಸಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಛೇರಿ ಮುಂದೆ ಟಿ.ಎ. ನಾರಾಯಣ ಗೌಡ ನೇತೃತ್ವದ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
 
ಟಿ.ಎ. ನಾರಾಯಣಗೌಡ ನೇತೃತ್ವದ ಕರವೇ ಕಾರ್ಯಕರ್ತರು ಕನ್ನಡಿಗರಲ್ಲದವರನ್ನು ರಾಜ್ಯಸಭೆಗೆ ಅಯ್ಕೆ ಮಾಡದಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿದ್ದಾರೆ.
 
ಪ್ರತಿಭಟನೆ ವೇಳೆ ಮಾತನಾಡಿದ ಟಿ.ಎ. ನಾರಾಯಣ ಗೌಡರು, ಕಳಸಾ ಬಂಡೂರಿ ಮತ್ತು ಮಹದಾಯಿ ನದಿ ಯೋಜನೆಯ ಕುರಿತು ವೆಂಕಯ್ಯನಾಯ್ಡು ಅವರು ಎಂದೂ ಧ್ವನಿ ಎತ್ತಿಲ್ಲ. ಕನ್ನಡಕ್ಕೆ ಅವರ ಕೊಡುಗೆ ಏನು? ಕನ್ನಡ ಪರ ಕಾಳಜಿ ಇರುವ ವ್ಯಕ್ತಿಯನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕಾಗಿದೆ. ಕನ್ನಡ ಪರ ಕಾಳಜಿ ಹೊಂದಿರುವ ಕೂಲಿ ಕಾರ್ಮಿಕನನ್ನು ರಾಜ್ಯಸಭೆಗೆ ಆಯ್ಕೆ ಮಾಡಿದರು ಪರವಾಗಿಲ್ಲ. ಆದರೆ, ಕನ್ನಡಿಗರಲ್ಲದವರನ್ನು ರಾಜ್ಯ ಸಭೆಗೆ ಆಯ್ಕೆ ಮಾಡದಂತೆ ಕರವೇ ಕಾರ್ಯಕರ್ತರು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಸಾಂ: ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಪ್ರಮಾಣ ವಚನ ಸ್ವೀಕಾರ