Webdunia - Bharat's app for daily news and videos

Install App

ರಾಜಧಾನಿಯಲ್ಲಿ ಅತ್ಯಂತ ಚಳಿ : 50 ವರ್ಷದಲ್ಲೇ ಇದೇ ಮೊದಲು

Webdunia
ಶುಕ್ರವಾರ, 13 ಮೇ 2022 (14:05 IST)
ಬೆಂಗಳೂರು: ನಗರದಲ್ಲಿ 50 ವರ್ಷಗಳಲ್ಲೇ ಮೇ ತಿಂಗಳಲ್ಲಿ ಎರಡನೇ ಅತ್ಯಂತ ಚಳಿಯ ದಿನ ಗುರುವಾರ (ಮೇ.12) ರಂದು ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ಬೆಂಗಳೂರು ನಗರದಲ್ಲಿ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. 34 ಡಿಗ್ರಿಯಿಂದ 23 ಡಿಗ್ರಿಗೆ ತಾಪಮಾನ ಒಮ್ಮೆಲೆ ಕುಸಿದಿತ್ತು ಎಂದು ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ತಿಳಿಸಿದೆ.  
 
ಇದಕ್ಕೂ ಮೊದಲು 1972ರಲ್ಲಿ ಮೇ 14 ರಂದು ಅತ್ಯಂತ ಕಡಿಮೆ ತಾಪಮಾನ ಅಂದರೆ 22.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು. ಅಲ್ಲದೇ ಅಂದು ಕನಿಷ್ಠ ತಾಪಮಾನವೂ ಮೂರು ಡಿಗ್ರಿ ಕಡಿಮೆಯಾಗಿ  19.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆಯ ಹಳೆ ದಾಖಲೆ ತಿಳಿಸಿದೆ. 
 
ಮೇ ತಿಂಗಳಲ್ಲಿ ಇಂತಹ ಸುಂದರವಾದ ತಾಪಮಾನ ದಾಖಲಾಗಲು ಕಾರಣ ಅಸಾನಿ ಚಂಡಮಾರುತದ ಪ್ರಭಾವ ಎಂದು ತಿಳಿದು ಬಂದಿದೆ. ಈಶಾನ್ಯ ಮತ್ತು ದಕ್ಷಿಣ ಕರ್ನಾಟಕದಲ್ಲಿ ವಿರಳವಾದ ಮೋಡಗಳು ಮತ್ತು ತಂಪಾದ ಗಾಳಿಯು ಚಾಲ್ತಿಯಲ್ಲಿದ್ದು, ಇದು ತಾಪಮಾನವನ್ನು ಕಡಿಮೆ ಮಾಡಿ ಮಳೆಯನ್ನು ತರುತ್ತಿರುವುದರಿಂದ ನಗರದಲ್ಲಿ ಆಹ್ಲಾದಕರ ವಾತಾವರಣ ಉಂಟಾಗಿದೆ. 
 
ಇದೇ ತಾಪಮಾನ ಇನ್ನು ಎರಡು ದಿನ ಮುಂದುವರಿಯಲಿದೆ ಹಾಗೂ ನಂತರ ಎಂದಿನ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದಕ್ಕೂ ಮೊದಲು ಮೇ 11 ರಂದು, ಅಸನಿ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ ತಾಪಮಾನದ ಮಟ್ಟವು ಗಮನಾರ್ಹವಾಗಿ ಕುಸಿದಿತ್ತು. ಅಲ್ಲದೇ ಭಾರಿ ಮಳೆಯಾಗಿತ್ತು. 
 
ನಗರವು ಕಳೆದ 10 ವರ್ಷಗಳಲ್ಲಿ ಮೇ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನ ಇದಾಗಿದೆ. ಮೇ 11 ರಂದು ತಾಪಮಾನ  24 ಡಿಗ್ರಿ ಸೆಲ್ಸಿಯಸ್ ಇತ್ತು. ಮಾರ್ಚ್‌ ತಿಂಗಳ ಮೊದಲ ಒಂಬತ್ತು ದಿನ ನಗರದ ಗರಿಷ್ಠ ಉಷ್ಣತೆ 32 ಡಿಗ್ರಿ ಸೆಲ್ಸಿಯಸ್‌ನ ಆಸುಪಾಸಿನಲ್ಲೇ ಇತ್ತು. ಅದೇ ರೀತಿ ಮೊದಲ 14 ದಿನದ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಒಳಗೆ ದಾಖಲಾಗಿತ್ತು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments